ದೊಡ್ಡಬಳ್ಳಾಪುರ: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ವಿರುದ್ಧ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಜೀರ್ ಅಹಮದ್ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕೂಡಲೇ ನಜೀರ್ ಅಹಮದ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಮೂವತ್ತೈದು ವರ್ಷಗಳ ಕಾಲ ಕಾಂಗ್ರೆಸ್ಸಿನಲ್ಲಿ ಶಿಸ್ತಿನ ಸಿಪಾಯಿಯಂತಿದ್ದ ಮುನಿಯಪ್ಪ ಅವರು ಎಂದಿಗೂ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿಲ್ಲ. ಯಾರಿಗೂ ಕೆಟ್ಟದ್ದನ್ನು ಬಯಸದ ವ್ಯಕ್ತಿತ್ವ ಅವರದ್ದು. ಇಂತ ರಾಜಕೀಯ ಮುತ್ಸದ್ಧಿ ಕುರಿತು ನಾಲಿಗೆ ಹರಿಬಿಟ್ಟಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.
ಎಡಗೈ ಸಮುದಾಯ ಭಾವನೆಗಳಿಗೆ ಘಾಸಿಗೊಳಿಸುವ ಮೂಲಕ ನಜೀರ್ ಅಹಮದ್ ಜಾತಿನಿಂದನೆ ಮಾಡಿದ್ದಾರೆ. ಕೂಡಲೇ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆರ್.ವಿ.ಮಹೇಶ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ತಾ.ಪಂ.ಮಾಜಿ ಸದಸ್ಯ ತೂಬಗೆರೆ ನಾಗರಾಜ್, ಆರ್.ವಿ.ಮನು, ದಲಿತ ಮುಖಂಡರಾದ ಮೈಲಾರಪ್ಪ, ನೇರಳಘಟ್ಟ ರಾಮು, ವೆಂಕಟೇಶಯ್ಯ, ರಾಮಚಂದ್ರಪ್ಪ, ಕೆ.ಎಚ್. ಮುನಿಯಪ್ಪ ಬೆಂಬಲಿಗರಾದ ಮನುಕುಮಾರ್ ವಿ, ನಾಗರಾಜ್ ಯಾದವ್, ರಂಗೇಗೌಡ, ಮನೋಜ್ ಇತರರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…