ದೊಡ್ಡಬಳ್ಳಾಪುರ: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ವಿರುದ್ಧ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಜೀರ್ ಅಹಮದ್ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕೂಡಲೇ ನಜೀರ್ ಅಹಮದ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಮೂವತ್ತೈದು ವರ್ಷಗಳ ಕಾಲ ಕಾಂಗ್ರೆಸ್ಸಿನಲ್ಲಿ ಶಿಸ್ತಿನ ಸಿಪಾಯಿಯಂತಿದ್ದ ಮುನಿಯಪ್ಪ ಅವರು ಎಂದಿಗೂ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿಲ್ಲ. ಯಾರಿಗೂ ಕೆಟ್ಟದ್ದನ್ನು ಬಯಸದ ವ್ಯಕ್ತಿತ್ವ ಅವರದ್ದು. ಇಂತ ರಾಜಕೀಯ ಮುತ್ಸದ್ಧಿ ಕುರಿತು ನಾಲಿಗೆ ಹರಿಬಿಟ್ಟಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.
ಎಡಗೈ ಸಮುದಾಯ ಭಾವನೆಗಳಿಗೆ ಘಾಸಿಗೊಳಿಸುವ ಮೂಲಕ ನಜೀರ್ ಅಹಮದ್ ಜಾತಿನಿಂದನೆ ಮಾಡಿದ್ದಾರೆ. ಕೂಡಲೇ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆರ್.ವಿ.ಮಹೇಶ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ತಾ.ಪಂ.ಮಾಜಿ ಸದಸ್ಯ ತೂಬಗೆರೆ ನಾಗರಾಜ್, ಆರ್.ವಿ.ಮನು, ದಲಿತ ಮುಖಂಡರಾದ ಮೈಲಾರಪ್ಪ, ನೇರಳಘಟ್ಟ ರಾಮು, ವೆಂಕಟೇಶಯ್ಯ, ರಾಮಚಂದ್ರಪ್ಪ, ಕೆ.ಎಚ್. ಮುನಿಯಪ್ಪ ಬೆಂಬಲಿಗರಾದ ಮನುಕುಮಾರ್ ವಿ, ನಾಗರಾಜ್ ಯಾದವ್, ರಂಗೇಗೌಡ, ಮನೋಜ್ ಇತರರು ಭಾಗವಹಿಸಿದ್ದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…