ದೊಡ್ಡಬಳ್ಳಾಪುರ: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ವಿರುದ್ಧ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಜೀರ್ ಅಹಮದ್ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕೂಡಲೇ ನಜೀರ್ ಅಹಮದ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಮೂವತ್ತೈದು ವರ್ಷಗಳ ಕಾಲ ಕಾಂಗ್ರೆಸ್ಸಿನಲ್ಲಿ ಶಿಸ್ತಿನ ಸಿಪಾಯಿಯಂತಿದ್ದ ಮುನಿಯಪ್ಪ ಅವರು ಎಂದಿಗೂ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿಲ್ಲ. ಯಾರಿಗೂ ಕೆಟ್ಟದ್ದನ್ನು ಬಯಸದ ವ್ಯಕ್ತಿತ್ವ ಅವರದ್ದು. ಇಂತ ರಾಜಕೀಯ ಮುತ್ಸದ್ಧಿ ಕುರಿತು ನಾಲಿಗೆ ಹರಿಬಿಟ್ಟಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.
ಎಡಗೈ ಸಮುದಾಯ ಭಾವನೆಗಳಿಗೆ ಘಾಸಿಗೊಳಿಸುವ ಮೂಲಕ ನಜೀರ್ ಅಹಮದ್ ಜಾತಿನಿಂದನೆ ಮಾಡಿದ್ದಾರೆ. ಕೂಡಲೇ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆರ್.ವಿ.ಮಹೇಶ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ತಾ.ಪಂ.ಮಾಜಿ ಸದಸ್ಯ ತೂಬಗೆರೆ ನಾಗರಾಜ್, ಆರ್.ವಿ.ಮನು, ದಲಿತ ಮುಖಂಡರಾದ ಮೈಲಾರಪ್ಪ, ನೇರಳಘಟ್ಟ ರಾಮು, ವೆಂಕಟೇಶಯ್ಯ, ರಾಮಚಂದ್ರಪ್ಪ, ಕೆ.ಎಚ್. ಮುನಿಯಪ್ಪ ಬೆಂಬಲಿಗರಾದ ಮನುಕುಮಾರ್ ವಿ, ನಾಗರಾಜ್ ಯಾದವ್, ರಂಗೇಗೌಡ, ಮನೋಜ್ ಇತರರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಲೀಸ್ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…