ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ‌ ವಿಚಾರ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ವಿರುದ್ಧ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ: ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಬೇಕೆಂದು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ

ದೊಡ್ಡಬಳ್ಳಾಪುರ: ಆಹಾರ‌ ಮತ್ತು ನಾಗರಿಕ‌ ಸರಬರಾಜು ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ‌ ನೀಡಿರುವ ವಿಧಾನ ಪರಿಷತ್ ಸದಸ್ಯರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ‌‌ ನಜೀರ್ ಅಹಮದ್ ವಿರುದ್ಧ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಜೀರ್ ಅಹಮದ್ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕೂಡಲೇ ನಜೀರ್ ಅಹಮದ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ವಿಧಾನಸೌಧದಲ್ಲಿ ಕೆ.ಹೆಚ್.ಮುನಿಯಪ್ಪ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ. ಏಳು ಬಾರಿ ಸಂಸದರಾಗಿ, ಹತ್ತು ವರ್ಷಗಳ ಕಾಲ ಕೇಂದ್ರ ಸಚಿವರಾಗಿ ರಾಜಕೀಯ ಅನುಭವ ಹೊಂದಿರುವ ಮುನಿಯಪ್ಪ ಅವರಿಗೆ ಅಗೌರವ ತರುವ ರೀತಿ ಮಾತನಾಡಿರುವುದು ಅಕ್ಷಮ್ಯ. ಕೂಡಲೇ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರಿಗೆ ಮನವಿ ಸಲ್ಲಿಸಿದರು.

ಮೂವತ್ತೈದು ವರ್ಷಗಳ ಕಾಲ ಕಾಂಗ್ರೆಸ್ಸಿನಲ್ಲಿ ಶಿಸ್ತಿನ ಸಿಪಾಯಿಯಂತಿದ್ದ ಮುನಿಯಪ್ಪ ಅವರು ಎಂದಿಗೂ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿಲ್ಲ. ಯಾರಿಗೂ ಕೆಟ್ಟದ್ದನ್ನು ಬಯಸದ ವ್ಯಕ್ತಿತ್ವ ಅವರದ್ದು. ಇಂತ ರಾಜಕೀಯ ಮುತ್ಸದ್ಧಿ ಕುರಿತು ನಾಲಿಗೆ ಹರಿಬಿಟ್ಟಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.

ಅಖಿಲ ಕರ್ನಾಟಕ ಕೆ.ಎಚ್.ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ವಕೀಲ ಆರ್.ವಿ.ಮಹೇಶ್ ಮಾತನಾಡಿ,   ನಜೀರ್ ಅಹಮದ್ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರೂ ಮುನಿಯಪ್ಪ ಅವರು, ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ. ಮುನಿಯಪ್ಪನವರು ಯಾರಿಗೂ ಕೆಟ್ಟದ್ದನ್ನು ಬಯಸಿಲ್ಲ, ಎಲ್ಲರಿಗೂ ಒಳ್ಳೆಯದನ್ನೇ ಬಯಸಿದ್ದಾರೆ. ಅಂತಹವರ ವಿರುದ್ಧ ನಜೀರ್ ಅಹಮದ್ ಅವಾಚ್ಯವಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಎಡಗೈ‌ ಸಮುದಾಯ ಭಾವನೆಗಳಿಗೆ ಘಾಸಿಗೊಳಿಸುವ‌ ಮೂಲಕ ನಜೀರ್ ಅಹಮದ್ ಜಾತಿನಿಂದನೆ ಮಾಡಿದ್ದಾರೆ. ಕೂಡಲೇ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆರ್.ವಿ.ಮಹೇಶ್ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತಾ.ಪಂ.ಮಾಜಿ ಸದಸ್ಯ ತೂಬಗೆರೆ ನಾಗರಾಜ್, ಆರ್.ವಿ.ಮನು, ದಲಿತ ಮುಖಂಡರಾದ ಮೈಲಾರಪ್ಪ, ನೇರಳಘಟ್ಟ ರಾಮು, ವೆಂಕಟೇಶಯ್ಯ, ರಾಮಚಂದ್ರಪ್ಪ, ಕೆ.ಎಚ್. ಮುನಿಯಪ್ಪ ಬೆಂಬಲಿಗರಾದ ಮನುಕುಮಾರ್ ವಿ, ನಾಗರಾಜ್ ಯಾದವ್, ರಂಗೇಗೌಡ, ಮನೋಜ್ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

6 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

17 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

18 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

18 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

20 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

23 hours ago