ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ‌ ವಿಚಾರ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ವಿರುದ್ಧ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ: ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಬೇಕೆಂದು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ

ದೊಡ್ಡಬಳ್ಳಾಪುರ: ಆಹಾರ‌ ಮತ್ತು ನಾಗರಿಕ‌ ಸರಬರಾಜು ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ‌ ನೀಡಿರುವ ವಿಧಾನ ಪರಿಷತ್ ಸದಸ್ಯರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ‌‌ ನಜೀರ್ ಅಹಮದ್ ವಿರುದ್ಧ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಜೀರ್ ಅಹಮದ್ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕೂಡಲೇ ನಜೀರ್ ಅಹಮದ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ವಿಧಾನಸೌಧದಲ್ಲಿ ಕೆ.ಹೆಚ್.ಮುನಿಯಪ್ಪ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ. ಏಳು ಬಾರಿ ಸಂಸದರಾಗಿ, ಹತ್ತು ವರ್ಷಗಳ ಕಾಲ ಕೇಂದ್ರ ಸಚಿವರಾಗಿ ರಾಜಕೀಯ ಅನುಭವ ಹೊಂದಿರುವ ಮುನಿಯಪ್ಪ ಅವರಿಗೆ ಅಗೌರವ ತರುವ ರೀತಿ ಮಾತನಾಡಿರುವುದು ಅಕ್ಷಮ್ಯ. ಕೂಡಲೇ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರಿಗೆ ಮನವಿ ಸಲ್ಲಿಸಿದರು.

ಮೂವತ್ತೈದು ವರ್ಷಗಳ ಕಾಲ ಕಾಂಗ್ರೆಸ್ಸಿನಲ್ಲಿ ಶಿಸ್ತಿನ ಸಿಪಾಯಿಯಂತಿದ್ದ ಮುನಿಯಪ್ಪ ಅವರು ಎಂದಿಗೂ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿಲ್ಲ. ಯಾರಿಗೂ ಕೆಟ್ಟದ್ದನ್ನು ಬಯಸದ ವ್ಯಕ್ತಿತ್ವ ಅವರದ್ದು. ಇಂತ ರಾಜಕೀಯ ಮುತ್ಸದ್ಧಿ ಕುರಿತು ನಾಲಿಗೆ ಹರಿಬಿಟ್ಟಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.

ಅಖಿಲ ಕರ್ನಾಟಕ ಕೆ.ಎಚ್.ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ವಕೀಲ ಆರ್.ವಿ.ಮಹೇಶ್ ಮಾತನಾಡಿ,   ನಜೀರ್ ಅಹಮದ್ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರೂ ಮುನಿಯಪ್ಪ ಅವರು, ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ. ಮುನಿಯಪ್ಪನವರು ಯಾರಿಗೂ ಕೆಟ್ಟದ್ದನ್ನು ಬಯಸಿಲ್ಲ, ಎಲ್ಲರಿಗೂ ಒಳ್ಳೆಯದನ್ನೇ ಬಯಸಿದ್ದಾರೆ. ಅಂತಹವರ ವಿರುದ್ಧ ನಜೀರ್ ಅಹಮದ್ ಅವಾಚ್ಯವಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಎಡಗೈ‌ ಸಮುದಾಯ ಭಾವನೆಗಳಿಗೆ ಘಾಸಿಗೊಳಿಸುವ‌ ಮೂಲಕ ನಜೀರ್ ಅಹಮದ್ ಜಾತಿನಿಂದನೆ ಮಾಡಿದ್ದಾರೆ. ಕೂಡಲೇ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆರ್.ವಿ.ಮಹೇಶ್ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತಾ.ಪಂ.ಮಾಜಿ ಸದಸ್ಯ ತೂಬಗೆರೆ ನಾಗರಾಜ್, ಆರ್.ವಿ.ಮನು, ದಲಿತ ಮುಖಂಡರಾದ ಮೈಲಾರಪ್ಪ, ನೇರಳಘಟ್ಟ ರಾಮು, ವೆಂಕಟೇಶಯ್ಯ, ರಾಮಚಂದ್ರಪ್ಪ, ಕೆ.ಎಚ್. ಮುನಿಯಪ್ಪ ಬೆಂಬಲಿಗರಾದ ಮನುಕುಮಾರ್ ವಿ, ನಾಗರಾಜ್ ಯಾದವ್, ರಂಗೇಗೌಡ, ಮನೋಜ್ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

26 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago