ಕೇಂದ್ರ ಮಾಜಿ ಸಚಿವರು, ಹಾಲಿ ರಾಜ್ಯ ಆಹಾರ ಸಚಿವರಾದ ಕೆಎಚ್ ಮುನಿಯಪ್ಪ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಲಿ ಎಂಬುದು ನಮ್ಮ ಅಭಿಲಾಷೆ ಎಂದು ಶ್ರೀಕ್ಷೇತ್ರ ಘಾಟಿ ಪ್ರಾಧಿಕಾರದ ಸದಸ್ಯ ಆರ್. ವಿ ಮಹೇಶ್ ಕುಮಾರ್ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಕೆಎಚ್ ಮುನಿಯಪ್ಪ ಜನ್ಮದಿನ ಪ್ರಯುಕ್ತ ಏರ್ಪಡಿಸಿದ್ದ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಹಿರಿಯರಾಗಿರುವ ಕೆಎಚ್ಎಂ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾಗಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಇವರ ಸೇವೆಯನ್ನು ಗುರುತಿಸಿ ದಲಿತ ಸಮುದಾಯದ ನಾಯಕರಿಗೆ ಉನ್ನತಮಟ್ಟದ ಅವಕಾಶವನ್ನು ನೀಡಬೇಕು ಎಂಬುದು ನಮ್ಮ ಒತ್ತಾಯವಾಗಿದೆ ಎಂದರು.
ಕೆಪಿಸಿಸಿ ಜಿಲ್ಲಾ ವಕ್ತಾರ ಜಿ.ಲಕ್ಷ್ಮೀಪತಿ ಮಾತನಾಡಿ, ಸರಳ ಸಜ್ಜನಿಕೆಯ ಭ್ರಷ್ಟಾಚಾರ ಮುಕ್ತವಾಗಿ ಆಡಳಿತ ನೀಡುವ ವ್ಯಕ್ತಿಯಾಗಿ ಕೆಎಚ್ ಮುನಿಯಪ್ಪ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಸೋಲಿಲ್ಲದ ಸರದಾರನಾಗಿ ಸಂಸದರಾಗಿ 7 ಬಾರಿ ಆಯ್ಕೆಯಾಗಿರುವ ಖ್ಯಾತಿ ಇವರದ್ದು. ಕಾಂಗ್ರೆಸ್ ಪಕ್ಷಕ್ಕೆ ಅವಿರತವಾಗಿ ದುಡಿದಿರುವ ಕೆಎಚ್ಎಂಗೆ ಸಿಎಂ ಸ್ಥಾನ ನೀಡುವುದು ಸೂಕ್ತವಾಗಿದೆ ಎಂದರು.
ಘಾಟಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಆರ್.ವಿ ಮಹೇಶ್ ಕುಮಾರ್, ರಂಗಪ್ಪ, ಮುಖಂಡರಾದ ಲಕ್ಷ್ಮೀಪತಿ, ಶ್ರೀಧರ್, ಆರ್ ವಿ ಮನು, ಆರ್.ವಿ ಶಿವಕುಮಾರ್, ಗೋಪಾಲನಾಯಕ್, ವೆಂಕಟೇಶ್ ಮತ್ತಿತ್ತರರು ಇದ್ದರು.
ಇಂದು ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇವರ ಜೊತೆ ಓರ್ವ ಡಿಸಿಎಂ ಸೇರಿ 12…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…