ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ: ಸಚಿವ ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಇಂದು

ದೊಡ್ಡಬಳ್ಳಾಪುರ: ಬೀದ‌ರ್ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿಯಿಂದ ಜ.4 ರಂದು ಸಚಿವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ದೊಡ್ಡರಿ ವೆಂಕಟೇಶ್ ಹೇಳಿದರು.

ಗುತ್ತಿಗೆದಾರನ ಆತ್ಮಹತ್ಯೆಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಸಂಬಂಧವಿದ್ದರೂ ಏನೂ ನಡೆದಿಲ್ಲ ಎಂಬಂತೆ ಉಡಾಫೆ ಉತ್ತರ ನೀಡುತ್ತಿದ್ದಾರೆ. ಮೃತ ಸಚಿನ್ ಪಾಂಚಾಳ ಏಳು ಪುಟ ಡೆತ್‌ನೊಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ಹಿಂದೂ ಸಮಾಜದ ಸಿದ್ದಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ, ಕಲಬುರ್ಗಿಯ ಬಿಜೆಪಿ ನಾಯಕರಾದ ಚಂದುಪಾಟೀಲ, ಮಣಿಕಂಠ ರಾಠೋಡ್ ಅವರ ಕೊಲೆಗೆ ಸಂಚು ರೂಪಿಸಿರುವ ಕುರಿತು ಡೆತ್ ನೋಟ್‌ನಲ್ಲಿ ಇದೆ ಎಂದು ದೂರಿದರು.

ಸಿದ್ದಲಿಂಗಸ್ವಾಮೀಜಿ ಅವರ ಧ್ವನಿ ಅಡಗಿಸಲು ಮಹಾರಾಷ್ಟ್ರದ ಸುಪಾರಿ ಕಿಲ್ಲರ್ ಬಳಸುವ ವಿಚಾರವೂ ಡೆತ್ ನೋಟಿನಲ್ಲಿದೆ. ಹಾಗಾಗಿ ಇದೊಂದು ಗಂಭೀರ ವಿಚಾರ. ರಾಜ್ಯದ ಪೊಲೀಸ್ ಇಲಾಖೆಯಿಂದ ಅತ್ಯಂತ ಶಕ್ತಿಶಾಲಿ ಖರ್ಗೆ ಕುಟುಂಬದ ವಿರುದ್ಧ ತನಿಖೆ ಮಾಡಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಸರ್ಕಾರಿ ನೌಕರರು, ಗುತ್ತಿಗೆದಾರರು ಸೇರಿ ಆರು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪ ಅವರ ಮೇಲೆ ಆರೋಪ ಬರುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ್ ಖರ್ಗೆ ಮರೆಯಬಾರದು. ಸಚಿನ್‌ ಅವರ ಕುಟುಂಬಕ್ಕೆ ತಕ್ಷಣದಿಂದ ಭದ್ರತೆ ಕಲ್ಪಿಸಬೇಕು. ಅವರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು. ಸೋದರಿಯರು ವಿದ್ಯಾವಂತರಿದ್ದು, ಕುಟುಂಬದ ಒಬ್ಬರು ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಒತ್ತಾಯಿಸಿದರು.

ಗುತ್ತಿಗೆದಾರರ ಆತ್ಮಹತ್ಯೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪಾತ್ರ ಇರುವುದು ಸ್ಪಷ್ಟ, ರಾಜಿನಾಮೆ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ (ಬಂತಿ), ರವಿಕುಮಾ‌ರ್ ಸೇರಿದಂತೆ ಇತರರ ಇದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

5 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

7 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

7 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

7 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

12 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

13 hours ago