ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ: ಸಚಿವ ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಇಂದು

ದೊಡ್ಡಬಳ್ಳಾಪುರ: ಬೀದ‌ರ್ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿಯಿಂದ ಜ.4 ರಂದು ಸಚಿವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ದೊಡ್ಡರಿ ವೆಂಕಟೇಶ್ ಹೇಳಿದರು.

ಗುತ್ತಿಗೆದಾರನ ಆತ್ಮಹತ್ಯೆಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಸಂಬಂಧವಿದ್ದರೂ ಏನೂ ನಡೆದಿಲ್ಲ ಎಂಬಂತೆ ಉಡಾಫೆ ಉತ್ತರ ನೀಡುತ್ತಿದ್ದಾರೆ. ಮೃತ ಸಚಿನ್ ಪಾಂಚಾಳ ಏಳು ಪುಟ ಡೆತ್‌ನೊಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ಹಿಂದೂ ಸಮಾಜದ ಸಿದ್ದಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ, ಕಲಬುರ್ಗಿಯ ಬಿಜೆಪಿ ನಾಯಕರಾದ ಚಂದುಪಾಟೀಲ, ಮಣಿಕಂಠ ರಾಠೋಡ್ ಅವರ ಕೊಲೆಗೆ ಸಂಚು ರೂಪಿಸಿರುವ ಕುರಿತು ಡೆತ್ ನೋಟ್‌ನಲ್ಲಿ ಇದೆ ಎಂದು ದೂರಿದರು.

ಸಿದ್ದಲಿಂಗಸ್ವಾಮೀಜಿ ಅವರ ಧ್ವನಿ ಅಡಗಿಸಲು ಮಹಾರಾಷ್ಟ್ರದ ಸುಪಾರಿ ಕಿಲ್ಲರ್ ಬಳಸುವ ವಿಚಾರವೂ ಡೆತ್ ನೋಟಿನಲ್ಲಿದೆ. ಹಾಗಾಗಿ ಇದೊಂದು ಗಂಭೀರ ವಿಚಾರ. ರಾಜ್ಯದ ಪೊಲೀಸ್ ಇಲಾಖೆಯಿಂದ ಅತ್ಯಂತ ಶಕ್ತಿಶಾಲಿ ಖರ್ಗೆ ಕುಟುಂಬದ ವಿರುದ್ಧ ತನಿಖೆ ಮಾಡಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಸರ್ಕಾರಿ ನೌಕರರು, ಗುತ್ತಿಗೆದಾರರು ಸೇರಿ ಆರು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪ ಅವರ ಮೇಲೆ ಆರೋಪ ಬರುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ್ ಖರ್ಗೆ ಮರೆಯಬಾರದು. ಸಚಿನ್‌ ಅವರ ಕುಟುಂಬಕ್ಕೆ ತಕ್ಷಣದಿಂದ ಭದ್ರತೆ ಕಲ್ಪಿಸಬೇಕು. ಅವರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು. ಸೋದರಿಯರು ವಿದ್ಯಾವಂತರಿದ್ದು, ಕುಟುಂಬದ ಒಬ್ಬರು ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಒತ್ತಾಯಿಸಿದರು.

ಗುತ್ತಿಗೆದಾರರ ಆತ್ಮಹತ್ಯೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪಾತ್ರ ಇರುವುದು ಸ್ಪಷ್ಟ, ರಾಜಿನಾಮೆ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ (ಬಂತಿ), ರವಿಕುಮಾ‌ರ್ ಸೇರಿದಂತೆ ಇತರರ ಇದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

10 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

12 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

12 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

12 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

15 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

18 hours ago