ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ ವೇಳೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರೂ, ಎರಡನೇ ಪಟ್ಟಿಯಲ್ಲೂ ಅವರ ಹೆಸರು ಕಾಣಿಸದ ಕಾರಣ ಅವರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಇದರಿಂದ ಅವರ ಬೆಂಬಲಿಗರಲ್ಲಿ ಬೇಸರ ವ್ಯಕ್ತವಾಗಿದೆ.
ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನಕ್ಕೆ ಆದ್ಯತೆ ನೀಡಿ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ನೂತನ ಸಚಿವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಭಾಶಯ ಕೋರಿದ್ದು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ಸಹೋದ್ಯೋಗಿಗಳಿಗೆ ಹಾಗೂ ವಿಧಾನಸಭೆಯ ಸಭಾಧ್ಯಕ್ಷ, ಉಪಸಭಾಧ್ಯಕ್ಷ, ವಿಧಾನಪರಿಷತ್ ಸಭಾಪತಿ ಮತ್ತು ಉಪಸಭಾಪತಿಯಾಗಿ ಆಯ್ಕೆಯಾದ ನಾಯಕರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ರಾಜಕೀಯ ಅನುಭವ ಮತ್ತು ಬದ್ಧತೆಯಿಂದ ಸರ್ಕಾರದ ಆಡಳಿತ ಮತ್ತಷ್ಟು ಚುರುಕುಗೊಳ್ಳಲಿದೆ ಎಂಬ ವಿಶ್ವಾಸವಿದೆ. ಪಾರದರ್ಶಕ, ದಕ್ಷ ಹಾಗೂ ಜನಪರ ಆಡಳಿತದ ಮೂಲಕ ರಾಜ್ಯದ ಜನರ ನಿರೀಕ್ಷೆಗಳನ್ನು ಈಡೇರಿಸೋಣ. ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಜವಾಬ್ದಾರಿಯನ್ನು ಎಲ್ಲರೂ ಒಗ್ಗಟ್ಟಿನಿಂದ ನಿಭಾಯಿಸೋಣ. ಬಲಿಷ್ಠ ಕರ್ನಾಟಕ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸೋಣ ಎಂದು ಹೇಳಿದ್ದಾರೆ.
ಸಚಿವ ಸ್ಥಾನ ಪಡೆದವರ ಪಟ್ಟಿ
ಪಿ.ಎಂ. ನರೇಂದ್ರಸ್ವಾಮಿ (ಮಳವಳ್ಳಿ) – 2ನೇ ಬಾರಿ
ಶಿವರಾಜ ತಂಗಡಗಿ (ಕನಕಗಿರಿ) – 4ನೇ ಬಾರಿ
ರುದ್ರಪ್ಪ ಲಮಾಣಿ (ಹಾವೇರಿ) – ಮೊದಲ ಬಾರಿ
ಕೆ.ಎಸ್. ಬಸವಂತಪ್ಪ (ಮಾಯಕೊಂಡ) – ಮೊದಲ ಬಾರಿ
ಬಿ. ನಾಗೇಂದ್ರ (ಬಳ್ಳಾರಿ) – 2ನೇ ಬಾರಿ
ಟಿ. ರಘುಮೂರ್ತಿ (ಚಳ್ಳಕೆರೆ) – ಮೊದಲ ಬಾರಿ
ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ) – 4ನೇ ಬಾರಿ
ರಿಜ್ವಾನ್ ಅರ್ಷದ್ (ಶಿವಾಜಿನಗರ) – ಮೊದಲ ಬಾರಿ
ಸಂತೋಷ್ ಲಾಡ್ (ಕಲಘಟಗಿ) – 3ನೇ ಬಾರಿ
ಮಧು ಬಂಗಾರಪ್ಪ (ಸೊರಬ) – 2ನೇ ಬಾರಿ
ಸಿ. ಪುಟ್ಟರಂಗಶೆಟ್ಟಿ (ಚಾಮರಾಜನಗರ) – 2ನೇ ಬಾರಿ
ಎಸ್.ಎಸ್. ಮಲ್ಲಿಕಾರ್ಜುನ
ಅಜಯ್ ಸಿಂಗ್ (ಜೇವರ್ಗಿ) – ಮೊದಲ ಬಾರಿ
ಎನ್. ಚಲುವರಾಯಸ್ವಾಮಿ (ನಾಗಮಂಗಲ) – 3ನೇ ಬಾರಿ
ಕೆ.ಎಂ. ಶಿವಲಿಂಗೇಗೌಡ (ಅರಸೀಕೆರೆ) – ಮೊದಲ ಬಾರಿ
ಎಚ್.ಸಿ. ಬಾಲಕೃಷ್ಣ (ಮಾಗಡಿ) – ಮೊದಲ ಬಾರಿ
ಎನ್.ಎಸ್. ಬೋಸರಾಜು
ಬಸವರಾಜ್ ರಾಯರೆಡ್ಡಿ (ಯಲಬುರ್ಗಾ) – 4ನೇ ಬಾರಿ
ವಿಜಯಾನಂದ ಕಾಶಪ್ಪನವರ್ (ಹುನಗುಂದ) – ಮೊದಲ ಬಾರಿ
ಲಕ್ಷ್ಮಣ ಸವದಿ (ಅಥಣಿ) – 3ನೇ ಬಾರಿ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…