ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ ವೇಳೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರೂ, ಎರಡನೇ ಪಟ್ಟಿಯಲ್ಲೂ ಅವರ ಹೆಸರು ಕಾಣಿಸದ ಕಾರಣ ಅವರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಇದರಿಂದ ಅವರ ಬೆಂಬಲಿಗರಲ್ಲಿ ಬೇಸರ ವ್ಯಕ್ತವಾಗಿದೆ.
ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನಕ್ಕೆ ಆದ್ಯತೆ ನೀಡಿ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ನೂತನ ಸಚಿವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಭಾಶಯ ಕೋರಿದ್ದು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ಸಹೋದ್ಯೋಗಿಗಳಿಗೆ ಹಾಗೂ ವಿಧಾನಸಭೆಯ ಸಭಾಧ್ಯಕ್ಷ, ಉಪಸಭಾಧ್ಯಕ್ಷ, ವಿಧಾನಪರಿಷತ್ ಸಭಾಪತಿ ಮತ್ತು ಉಪಸಭಾಪತಿಯಾಗಿ ಆಯ್ಕೆಯಾದ ನಾಯಕರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ರಾಜಕೀಯ ಅನುಭವ ಮತ್ತು ಬದ್ಧತೆಯಿಂದ ಸರ್ಕಾರದ ಆಡಳಿತ ಮತ್ತಷ್ಟು ಚುರುಕುಗೊಳ್ಳಲಿದೆ ಎಂಬ ವಿಶ್ವಾಸವಿದೆ. ಪಾರದರ್ಶಕ, ದಕ್ಷ ಹಾಗೂ ಜನಪರ ಆಡಳಿತದ ಮೂಲಕ ರಾಜ್ಯದ ಜನರ ನಿರೀಕ್ಷೆಗಳನ್ನು ಈಡೇರಿಸೋಣ. ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಜವಾಬ್ದಾರಿಯನ್ನು ಎಲ್ಲರೂ ಒಗ್ಗಟ್ಟಿನಿಂದ ನಿಭಾಯಿಸೋಣ. ಬಲಿಷ್ಠ ಕರ್ನಾಟಕ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸೋಣ ಎಂದು ಹೇಳಿದ್ದಾರೆ.
ಸಚಿವ ಸ್ಥಾನ ಪಡೆದವರ ಪಟ್ಟಿ
ಪಿ.ಎಂ. ನರೇಂದ್ರಸ್ವಾಮಿ (ಮಳವಳ್ಳಿ) – 2ನೇ ಬಾರಿ
ಶಿವರಾಜ ತಂಗಡಗಿ (ಕನಕಗಿರಿ) – 4ನೇ ಬಾರಿ
ರುದ್ರಪ್ಪ ಲಮಾಣಿ (ಹಾವೇರಿ) – ಮೊದಲ ಬಾರಿ
ಕೆ.ಎಸ್. ಬಸವಂತಪ್ಪ (ಮಾಯಕೊಂಡ) – ಮೊದಲ ಬಾರಿ
ಬಿ. ನಾಗೇಂದ್ರ (ಬಳ್ಳಾರಿ) – 2ನೇ ಬಾರಿ
ಟಿ. ರಘುಮೂರ್ತಿ (ಚಳ್ಳಕೆರೆ) – ಮೊದಲ ಬಾರಿ
ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ) – 4ನೇ ಬಾರಿ
ರಿಜ್ವಾನ್ ಅರ್ಷದ್ (ಶಿವಾಜಿನಗರ) – ಮೊದಲ ಬಾರಿ
ಸಂತೋಷ್ ಲಾಡ್ (ಕಲಘಟಗಿ) – 3ನೇ ಬಾರಿ
ಮಧು ಬಂಗಾರಪ್ಪ (ಸೊರಬ) – 2ನೇ ಬಾರಿ
ಸಿ. ಪುಟ್ಟರಂಗಶೆಟ್ಟಿ (ಚಾಮರಾಜನಗರ) – 2ನೇ ಬಾರಿ
ಎಸ್.ಎಸ್. ಮಲ್ಲಿಕಾರ್ಜುನ
ಅಜಯ್ ಸಿಂಗ್ (ಜೇವರ್ಗಿ) – ಮೊದಲ ಬಾರಿ
ಎನ್. ಚಲುವರಾಯಸ್ವಾಮಿ (ನಾಗಮಂಗಲ) – 3ನೇ ಬಾರಿ
ಕೆ.ಎಂ. ಶಿವಲಿಂಗೇಗೌಡ (ಅರಸೀಕೆರೆ) – ಮೊದಲ ಬಾರಿ
ಎಚ್.ಸಿ. ಬಾಲಕೃಷ್ಣ (ಮಾಗಡಿ) – ಮೊದಲ ಬಾರಿ
ಎನ್.ಎಸ್. ಬೋಸರಾಜು
ಬಸವರಾಜ್ ರಾಯರೆಡ್ಡಿ (ಯಲಬುರ್ಗಾ) – 4ನೇ ಬಾರಿ
ವಿಜಯಾನಂದ ಕಾಶಪ್ಪನವರ್ (ಹುನಗುಂದ) – ಮೊದಲ ಬಾರಿ
ಲಕ್ಷ್ಮಣ ಸವದಿ (ಅಥಣಿ) – 3ನೇ ಬಾರಿ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…