ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ


ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ ವೇಳೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರೂ, ಎರಡನೇ ಪಟ್ಟಿಯಲ್ಲೂ ಅವರ ಹೆಸರು ಕಾಣಿಸದ ಕಾರಣ ಅವರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಇದರಿಂದ ಅವರ ಬೆಂಬಲಿಗರಲ್ಲಿ ಬೇಸರ ವ್ಯಕ್ತವಾಗಿದೆ.

ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನಕ್ಕೆ ಆದ್ಯತೆ ನೀಡಿ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ನೂತನ ಸಚಿವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಭಾಶಯ ಕೋರಿದ್ದು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ಸಹೋದ್ಯೋಗಿಗಳಿಗೆ ಹಾಗೂ ವಿಧಾನಸಭೆಯ ಸಭಾಧ್ಯಕ್ಷ, ಉಪಸಭಾಧ್ಯಕ್ಷ, ವಿಧಾನಪರಿಷತ್ ಸಭಾಪತಿ ಮತ್ತು ಉಪಸಭಾಪತಿಯಾಗಿ ಆಯ್ಕೆಯಾದ ನಾಯಕರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ರಾಜಕೀಯ ಅನುಭವ ಮತ್ತು ಬದ್ಧತೆಯಿಂದ ಸರ್ಕಾರದ ಆಡಳಿತ ಮತ್ತಷ್ಟು ಚುರುಕುಗೊಳ್ಳಲಿದೆ ಎಂಬ ವಿಶ್ವಾಸವಿದೆ. ಪಾರದರ್ಶಕ, ದಕ್ಷ ಹಾಗೂ ಜನಪರ ಆಡಳಿತದ ಮೂಲಕ ರಾಜ್ಯದ ಜನರ ನಿರೀಕ್ಷೆಗಳನ್ನು ಈಡೇರಿಸೋಣ. ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಜವಾಬ್ದಾರಿಯನ್ನು ಎಲ್ಲರೂ ಒಗ್ಗಟ್ಟಿನಿಂದ ನಿಭಾಯಿಸೋಣ. ಬಲಿಷ್ಠ ಕರ್ನಾಟಕ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸೋಣ ಎಂದು ಹೇಳಿದ್ದಾರೆ.

ಸಚಿವ ಸ್ಥಾನ ಪಡೆದವರ ಪಟ್ಟಿ

ಪಿ.ಎಂ. ನರೇಂದ್ರಸ್ವಾಮಿ (ಮಳವಳ್ಳಿ) – 2ನೇ ಬಾರಿ

ಶಿವರಾಜ ತಂಗಡಗಿ (ಕನಕಗಿರಿ) – 4ನೇ ಬಾರಿ

ರುದ್ರಪ್ಪ ಲಮಾಣಿ (ಹಾವೇರಿ) – ಮೊದಲ ಬಾರಿ

ಕೆ.ಎಸ್. ಬಸವಂತಪ್ಪ (ಮಾಯಕೊಂಡ) – ಮೊದಲ ಬಾರಿ

ಬಿ. ನಾಗೇಂದ್ರ (ಬಳ್ಳಾರಿ) – 2ನೇ ಬಾರಿ

ಟಿ. ರಘುಮೂರ್ತಿ (ಚಳ್ಳಕೆರೆ) – ಮೊದಲ ಬಾರಿ

ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ) – 4ನೇ ಬಾರಿ

ರಿಜ್ವಾನ್ ಅರ್ಷದ್ (ಶಿವಾಜಿನಗರ) – ಮೊದಲ ಬಾರಿ

ಸಂತೋಷ್ ಲಾಡ್ (ಕಲಘಟಗಿ) – 3ನೇ ಬಾರಿ

ಮಧು ಬಂಗಾರಪ್ಪ (ಸೊರಬ) – 2ನೇ ಬಾರಿ

ಸಿ. ಪುಟ್ಟರಂಗಶೆಟ್ಟಿ (ಚಾಮರಾಜನಗರ) – 2ನೇ ಬಾರಿ

ಎಸ್.ಎಸ್. ಮಲ್ಲಿಕಾರ್ಜುನ

ಅಜಯ್ ಸಿಂಗ್ (ಜೇವರ್ಗಿ) – ಮೊದಲ ಬಾರಿ

ಎನ್. ಚಲುವರಾಯಸ್ವಾಮಿ (ನಾಗಮಂಗಲ) – 3ನೇ ಬಾರಿ

ಕೆ.ಎಂ. ಶಿವಲಿಂಗೇಗೌಡ (ಅರಸೀಕೆರೆ) – ಮೊದಲ ಬಾರಿ

ಎಚ್.ಸಿ. ಬಾಲಕೃಷ್ಣ (ಮಾಗಡಿ) – ಮೊದಲ ಬಾರಿ

ಎನ್.ಎಸ್. ಬೋಸರಾಜು

ಬಸವರಾಜ್ ರಾಯರೆಡ್ಡಿ (ಯಲಬುರ್ಗಾ) – 4ನೇ ಬಾರಿ

ವಿಜಯಾನಂದ ಕಾಶಪ್ಪನವರ್ (ಹುನಗುಂದ) – ಮೊದಲ ಬಾರಿ

ಲಕ್ಷ್ಮಣ ಸವದಿ (ಅಥಣಿ) – 3ನೇ ಬಾರಿ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

18 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

23 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago