ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ.

ತಾವು ನಿರೀಕ್ಷಿಸಿದ್ದ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿರುವುದಾಗಿ ಅವರು ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, “ನಾನು 1973ರಲ್ಲಿ ವಿದ್ಯಾರ್ಥಿ ನಾಯಕನಾಗಿ ರಾಜಕೀಯ ಜೀವನ ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ನನಗೆ ಟಿಕೆಟ್ ನೀಡಿದ್ದರು. ಆರು ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಯಾವುದೇ ಸಂದರ್ಭದಲ್ಲಿ ನಿರ್ದಿಷ್ಟ ಖಾತೆಗಾಗಿ ಲಾಬಿ ನಡೆಸಿಲ್ಲ” ಎಂದು ಹೇಳಿದರು.

“ಮುಖ್ಯಮಂತ್ರಿಗಳು ಎರಡು ಬಾರಿ ಕರೆದು ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಖಾತೆ ಹಂಚಿಕೆ ವೇಳೆ ಆ ಮಾತು ಉಳಿಸಿಕೊಳ್ಳಲಿಲ್ಲ. ಈ ವಿಚಾರದಿಂದ ಬೇಸರಗೊಂಡು ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದೇನೆ” ಎಂದು ಅವರು ತಿಳಿಸಿದರು.

ಇನ್ನೂ, “ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನದ ದಿನವೇ ಅವರನ್ನು ಭೇಟಿ ಮಾಡಿದ್ದೆ. ನಾನು ಸಚಿವ ಸ್ಥಾನಕ್ಕಾಗಿ ಅಥವಾ ಯಾವುದೇ ಖಾತೆಗಾಗಿ ಕೇಳಿರಲಿಲ್ಲ. ಆದರೆ ಅವರೇ ಬೆಂಗಳೂರು ಅಭಿವೃದ್ಧಿ ಖಾತೆ ನೀಡುವುದಾಗಿ ಹೇಳಿ ಈಗ ಮಾತು ತಪ್ಪಿದ್ದಾರೆ” ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದರು.

ಸಚಿವರ ರಾಜೀನಾಮೆಯಿಂದ ಹೊಸ ಸರ್ಕಾರದ ಒಳಗಿನ ಅಸಮಾಧಾನ ಬಹಿರಂಗವಾಗಿದ್ದು, ಮುಂದಿನ ದಿನಗಳಲ್ಲಿ ಇದರ ರಾಜಕೀಯ ಪರಿಣಾಮಗಳ ಬಗ್ಗೆ ಕುತೂಹಲ ಮೂಡಿದೆ.

Ramesh Babu

Journalist

Recent Posts

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

8 hours ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

13 hours ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

20 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

1 day ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

2 days ago