ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ ಸಂಬಂಧಿತ ವಿಚಾರಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಗೆ ತೆರಳುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, “ನಾನು ದೆಹಲಿಗೆ ಹೋಗುತ್ತಿಲ್ಲ. ಅವರಿಬ್ಬರನ್ನು(ಸಿಎಂ, ಡಿಸಿಎಂ) ಕರೆದಿದ್ದಾರೆ, ಅವರು ಹೋಗಿ ಬರುತ್ತಾರೆ” ಎಂದು ಸ್ಪಷ್ಟಪಡಿಸಿದರು.

ಸಚಿವ ಸ್ಥಾನ ತ್ಯಾಗ ಮಾಡುವ ಸಾಧ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಎಲ್ಲಕ್ಕೂ ತಯಾರಿದ್ದೇನೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಅದಕ್ಕೆ ನಾವು ಬದ್ದರಾಗಿದ್ದೇವೆ” ಎಂದು ಹೇಳಿದರು.

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪೂರೈಕೆ ವಿಳಂಬವಾಗಿರುವ ಕುರಿತು ಮಾತನಾಡಿದ ಸಚಿವರು, ಯಾವುದೇ ರೀತಿಯ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದರು. “ಕೇಂದ್ರ ಸರ್ಕಾರದಿಂದ 3 ಕೆಜಿ, ರಾಜ್ಯ ಸರ್ಕಾರದಿಂದ 3 ಕೆಜಿ ರಾಗಿ ನೀಡುತ್ತಿದ್ದೇವೆ. ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಒಟ್ಟು 4 ಕೆಜಿ ಅಕ್ಕಿಯನ್ನೂ ನೀಡಲಾಗುತ್ತಿದೆ. ಒಟ್ಟಾರೆ 10 ಕೆಜಿ ಆಹಾರಧಾನ್ಯ ವಿತರಣೆ ಮಾಡುತ್ತಿದ್ದೇವೆ” ಎಂದರು.

ರಾಜ್ಯದಲ್ಲಿ ರಾಗಿ ಸಂಗ್ರಹ ಹೆಚ್ಚು ಇರುವ ಹಿನ್ನೆಲೆ ಈ ತಿಂಗಳಿನಿಂದಲೇ ಅದರ ವಿತರಣೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದ ಅವರು, “ರಾಗಿ ಪ್ಯಾಕ್ ಮಾಡುವ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬವಾಗಿರಬಹುದು. ತಡವಾದರೂ ಆ ತಿಂಗಳಿಗೆ ನೀಡಬೇಕಾದ ಆಹಾರಧಾನ್ಯವನ್ನು ಖಚಿತವಾಗಿ ನೀಡುತ್ತೇವೆ” ಎಂದು ಭರವಸೆ ನೀಡಿದರು.

ಇಂದಿರಾ ಕಿಟ್ ವಿತರಣೆ ಆಗದಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಅದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಯಾವುದೇ ತಿಂಗಳು ಮಿಸ್ ಆಗುವುದಿಲ್ಲ, ಕಿಟ್‌ಗಳನ್ನು ಖಚಿತವಾಗಿ ವಿತರಿಸುತ್ತೇವೆ” ಎಂದು ಹೇಳಿದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

3 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

5 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

17 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

17 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

17 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

19 hours ago