ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, ಪಕ್ಷದ ವರಿಷ್ಠರಿಗೆ ತಮ್ಮ ಮೇಲೆ ನಂಬಿಕೆ ಇದ್ದು ಸಚಿವ ಸ್ಥಾನ ನೀಡಿದರೆ ಸಂತೋಷವಾಗುತ್ತದೆ ಎಂದು ಹೇಳಿದರು.
ಹೊಸ ಮುಖಗಳಿಗೆ ಅವಕಾಶ ನೀಡಿದರೆ ಸರ್ಕಾರದಲ್ಲಿ ಹೊಸ ಚಾಪು ಮೂಡಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ನಾನು ಯಾವುದೇ ಸಚಿವ ಸ್ಥಾನಕ್ಕಾಗಿ ಯಾವುದೇ ಲಾಬಿ ಮಾಡುತ್ತಿಲ್ಲ. ಮಹಿಳೆಯರಿಗೆ ಅವಕಾಶ ನೀಡಿದರೆ ಸಚಿವೆಯಾಗಿ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ತೋರಿಸುತ್ತೇನೆ ಎಂದು ನಯನ ಮೋಟಮ್ಮ ಹೇಳಿದರು.
ಸದ್ಯದಲ್ಲೇ ಸಚಿವರ ಪಟ್ಟಿ ಪ್ರಕಟವಾಗುವ ವಿಶ್ವಾಸವಿದೆ. ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ಇನ್ನೂ ಸುಮಾರು ಇಪ್ಪತ್ತು ಇಲಾಖೆಗಳ ಜವಾಬ್ದಾರಿ ಹಂಚಿಕೆ ಬಾಕಿಯಿರುವುದರಿಂದ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…