ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ಜಿಎಸ್ ಟಿ ನೋಟಿಸ್: ಈ ಕುರಿತು ಸಿಎಂ ಸಭೆ: ಸಭೆ ಮುಖ್ಯಾಂಶಗಳು ಇಲ್ಲಿವೆ ಓದಿ…

ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

• ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ.

• ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆʼ.

. ಜಿಎಸ್‌ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ನೀತಿ-ನಿಯಮಾವಳಿಗಳ ರಚನೆಯಲ್ಲಿ ರಾಜ್ಯಗಳ ಪಾತ್ರ ಇಲ್ಲ.

. ರಾಜ್ಯ ಸರ್ಕಾರ ಸಂಗ್ರಹಿಸುವ ಜಿಎಸ್ ಟಿಯಲ್ಲಿ ಶೇಕಡಾ 50ರಷ್ಟು ಮೊತ್ತ ಮಾತ್ರ ರಾಜ್ಯಕ್ಕೆ ನೀಡಲಾಗುತ್ತದೆ. ಕರ್ನಾಟಕ ಸರ್ಕಾರ ತೆರಿಗೆ ಸಂಗ್ರಹವನ್ನು ಉತ್ತಮ ರೀತಿಯಲ್ಲಿ ಮಾಡುತ್ತಿದೆ. ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

• ಜಿಎಸ್‌ಟಿ ನೊಟೀಸ್ ಗಳನ್ನು ನಿಯಮಾನುಸಾರವಾಗಿಯೇ ನೀಡಲಾಗಿದೆ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕುʼ ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.

• ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕು. ಜಿಎಸ್‌ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.

• ಯುಪಿಐ ಅಡಿ ರೂ. 40 ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್‌ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.

* ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೀಡಿದ್ದರೆ ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿಮಾಡಬೇಕು.

• ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18 ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ.

• ವ್ಯಾಪಾರ ವಹಿವಾಟುಗಳನ್ನು ನಡೆಸಲು ಕಾನೂನುಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ.

• ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿ ಮಾಡಲಾಗುವುದು.

• ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 hour ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

5 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

7 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

18 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

19 hours ago