ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ಜಿಎಸ್ ಟಿ ನೋಟಿಸ್: ಈ ಕುರಿತು ಸಿಎಂ ಸಭೆ: ಸಭೆ ಮುಖ್ಯಾಂಶಗಳು ಇಲ್ಲಿವೆ ಓದಿ…

ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

• ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ.

• ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆʼ.

. ಜಿಎಸ್‌ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ನೀತಿ-ನಿಯಮಾವಳಿಗಳ ರಚನೆಯಲ್ಲಿ ರಾಜ್ಯಗಳ ಪಾತ್ರ ಇಲ್ಲ.

. ರಾಜ್ಯ ಸರ್ಕಾರ ಸಂಗ್ರಹಿಸುವ ಜಿಎಸ್ ಟಿಯಲ್ಲಿ ಶೇಕಡಾ 50ರಷ್ಟು ಮೊತ್ತ ಮಾತ್ರ ರಾಜ್ಯಕ್ಕೆ ನೀಡಲಾಗುತ್ತದೆ. ಕರ್ನಾಟಕ ಸರ್ಕಾರ ತೆರಿಗೆ ಸಂಗ್ರಹವನ್ನು ಉತ್ತಮ ರೀತಿಯಲ್ಲಿ ಮಾಡುತ್ತಿದೆ. ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

• ಜಿಎಸ್‌ಟಿ ನೊಟೀಸ್ ಗಳನ್ನು ನಿಯಮಾನುಸಾರವಾಗಿಯೇ ನೀಡಲಾಗಿದೆ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕುʼ ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.

• ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕು. ಜಿಎಸ್‌ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.

• ಯುಪಿಐ ಅಡಿ ರೂ. 40 ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್‌ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.

* ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೀಡಿದ್ದರೆ ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿಮಾಡಬೇಕು.

• ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18 ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ.

• ವ್ಯಾಪಾರ ವಹಿವಾಟುಗಳನ್ನು ನಡೆಸಲು ಕಾನೂನುಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ.

• ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿ ಮಾಡಲಾಗುವುದು.

• ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

36 minutes ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

41 minutes ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

3 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

6 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

8 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

12 hours ago