ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ಜಿಎಸ್ ಟಿ ನೋಟಿಸ್: ಈ ಕುರಿತು ಸಿಎಂ ಸಭೆ: ಸಭೆ ಮುಖ್ಯಾಂಶಗಳು ಇಲ್ಲಿವೆ ಓದಿ…

ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

• ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ.

• ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆʼ.

. ಜಿಎಸ್‌ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ನೀತಿ-ನಿಯಮಾವಳಿಗಳ ರಚನೆಯಲ್ಲಿ ರಾಜ್ಯಗಳ ಪಾತ್ರ ಇಲ್ಲ.

. ರಾಜ್ಯ ಸರ್ಕಾರ ಸಂಗ್ರಹಿಸುವ ಜಿಎಸ್ ಟಿಯಲ್ಲಿ ಶೇಕಡಾ 50ರಷ್ಟು ಮೊತ್ತ ಮಾತ್ರ ರಾಜ್ಯಕ್ಕೆ ನೀಡಲಾಗುತ್ತದೆ. ಕರ್ನಾಟಕ ಸರ್ಕಾರ ತೆರಿಗೆ ಸಂಗ್ರಹವನ್ನು ಉತ್ತಮ ರೀತಿಯಲ್ಲಿ ಮಾಡುತ್ತಿದೆ. ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

• ಜಿಎಸ್‌ಟಿ ನೊಟೀಸ್ ಗಳನ್ನು ನಿಯಮಾನುಸಾರವಾಗಿಯೇ ನೀಡಲಾಗಿದೆ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕುʼ ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.

• ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕು. ಜಿಎಸ್‌ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.

• ಯುಪಿಐ ಅಡಿ ರೂ. 40 ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್‌ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.

* ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೀಡಿದ್ದರೆ ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿಮಾಡಬೇಕು.

• ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18 ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ.

• ವ್ಯಾಪಾರ ವಹಿವಾಟುಗಳನ್ನು ನಡೆಸಲು ಕಾನೂನುಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ.

• ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿ ಮಾಡಲಾಗುವುದು.

• ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 hour ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

5 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

7 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

9 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago