ಕೋಲಾರ: ಸಮಾಜದಲ್ಲಿ ಸಣ್ಣಪುಟ್ಟ ಸಮುದಾಯಗಳನ್ನು ಪೋತ್ಸಾಹಿಸಿ ಬೆಂಬಲಿಸಿದಾಗ ಮಾತ್ರವೇ ಅ ಸಮುದಾಯಗಳು ಕೂಡ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.
ನಗರದ ಕೆ.ವಿ.ಆರ್.ಸಿ ಸಮುದಾಯ ಭವನದಲ್ಲಿ ಭಾನುವಾರ ನಾಮಧಾರಿ ನಗರ್ತ ಫೌಂಡೇಶನ್ ವತಿಯಿಂದ ಸಮುದಾಯದ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ವಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಸುಮಾರು 71 ಸಣ್ಣಪುಟ್ಟ ಅಲೆಮಾರಿ ಸಮುದಾಯಗಳು ಇದ್ದು ಅವರು ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿ ಗುರುತಿಸಿಕೊಳ್ಳಬೇಕಾಗಿದೆ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿ ಉನ್ನತ ಮಟ್ಟದ ಅಧಿಕಾರಿಗಳಾಗಿ ಮಾಡುವ ಜವಾಬ್ದಾರಿ ಸಮುದಾಯದ ಮುಖಂಡರ ಮೇಲೆ ಇದೆ ಎಂದರು.
ಸಣ್ಣಪುಟ್ಟ ಸಮುದಾಯಗಳು ಮುಖ್ಯವಾಹಿನಿಗೆ ಬಂದು ಸದೃಢರಾಗಬೇಕಬೇಕಾದರೆ ಮೊದಲು ಶಿಕ್ಷಣ ಮತ್ತು ಉದ್ಯೋಗದಿಂದ ಸಾಧ್ಯ ಸಮುದಾಯದ ನಿರಂತರ ಕಾರ್ಯಕ್ರಮಗಳಿಗೆ ಸಮುದಾಯ ಭವನವನ್ನು ನಿರ್ಮಿಸಲು ಜಾಗವನ್ನು ನೀಡಲಾಗುತ್ತದೆ ಜೊತೆಗೆ ಅನುದಾನವನ್ನು ಕೊಡಲಾಗುತ್ತದೆ ಜೊತೆಗೆ ಮಕ್ಕಳ ಶೈಕ್ಷಣಿಕ ವಿಧ್ಯಾಭ್ಯಾಸಕ್ಕಾಗಿ ಹಾಸ್ಟಲ್ ವ್ಯವಸ್ಥೆ ಮಾಡಲಾಗುತ್ತದೆ ಕೂಡಲೇ ಸರ್ಕಾರದೊಂದಿಗೆ ಪ್ರಸ್ತಾಪನೆ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಬೆಂಗಳೂರು ಡಿಸಿಪಿ ಡಿ.ದೇವರಾಜ್ ಮಾತನಾಡಿ, ಯಾವುದೇ ಸಮಾಜದಲ್ಲಿ ಆದರೂ ಮಕ್ಕಳನ್ನು ಗುರುತಿಸಿ ವಿದ್ಯಾಭ್ಯಾಸದಲ್ಲಿ ಪೋತ್ಸಾಹಿಸಿದಾಗ ಸಮುದಾಯ ಅಭಿವೃದ್ಧಿ ಹೊಂದುವಂತೆ ಮಾಡಲು ಸಾಧ್ಯ ಮಕ್ಕಳು ಸಾಧನೆ ಮಾಡಿದಾಗ ಗುರುತಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆ ಅದೇ ಕ್ಷೇತ್ರದ ಕಡೆಗೆ ಒಲವು ತೋರಿಸಬೇಕು ಒಂದಿಷ್ಟು ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ದಾರಿ ತೋರಿಸಬೇಕು ಎಂದರು.
ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ನಾಮಧಾರಿ ನಗರ್ತ ಫೌಂಡೇಶನ್ ಅಧ್ಯಕ್ಷ ಜಿ.ಆನಂದಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಗರಸಭೆ ನಿವೃತ್ತ ಪೌರಾಯುಕ್ತ ರಾಮಪ್ರಸಾದ್, ಮುಖಂಡರಾದ ವಿಶ್ವನಾಥ್, ರಾಮಕೃಷ್ಣ, ನಾಗರಾಜಶೆಟ್ಟಿ, ಮಂಜುನಾಥ್ ಮುಳಬಾಗಿಲು ನಗರಸಭೆ ಸದಸ್ಯ ಪ್ರಸಾದ್, ಜಯರಾಮ್, ಸೋಮಶೇಖರ್, ಸರೋಜ ಮುಂತಾದವರು ಇದ್ದರು
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…