ಕೋಲಾರ: ಸಮಾಜದಲ್ಲಿ ಸಣ್ಣಪುಟ್ಟ ಸಮುದಾಯಗಳನ್ನು ಪೋತ್ಸಾಹಿಸಿ ಬೆಂಬಲಿಸಿದಾಗ ಮಾತ್ರವೇ ಅ ಸಮುದಾಯಗಳು ಕೂಡ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.
ನಗರದ ಕೆ.ವಿ.ಆರ್.ಸಿ ಸಮುದಾಯ ಭವನದಲ್ಲಿ ಭಾನುವಾರ ನಾಮಧಾರಿ ನಗರ್ತ ಫೌಂಡೇಶನ್ ವತಿಯಿಂದ ಸಮುದಾಯದ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ವಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಸುಮಾರು 71 ಸಣ್ಣಪುಟ್ಟ ಅಲೆಮಾರಿ ಸಮುದಾಯಗಳು ಇದ್ದು ಅವರು ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿ ಗುರುತಿಸಿಕೊಳ್ಳಬೇಕಾಗಿದೆ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿ ಉನ್ನತ ಮಟ್ಟದ ಅಧಿಕಾರಿಗಳಾಗಿ ಮಾಡುವ ಜವಾಬ್ದಾರಿ ಸಮುದಾಯದ ಮುಖಂಡರ ಮೇಲೆ ಇದೆ ಎಂದರು.
ಸಣ್ಣಪುಟ್ಟ ಸಮುದಾಯಗಳು ಮುಖ್ಯವಾಹಿನಿಗೆ ಬಂದು ಸದೃಢರಾಗಬೇಕಬೇಕಾದರೆ ಮೊದಲು ಶಿಕ್ಷಣ ಮತ್ತು ಉದ್ಯೋಗದಿಂದ ಸಾಧ್ಯ ಸಮುದಾಯದ ನಿರಂತರ ಕಾರ್ಯಕ್ರಮಗಳಿಗೆ ಸಮುದಾಯ ಭವನವನ್ನು ನಿರ್ಮಿಸಲು ಜಾಗವನ್ನು ನೀಡಲಾಗುತ್ತದೆ ಜೊತೆಗೆ ಅನುದಾನವನ್ನು ಕೊಡಲಾಗುತ್ತದೆ ಜೊತೆಗೆ ಮಕ್ಕಳ ಶೈಕ್ಷಣಿಕ ವಿಧ್ಯಾಭ್ಯಾಸಕ್ಕಾಗಿ ಹಾಸ್ಟಲ್ ವ್ಯವಸ್ಥೆ ಮಾಡಲಾಗುತ್ತದೆ ಕೂಡಲೇ ಸರ್ಕಾರದೊಂದಿಗೆ ಪ್ರಸ್ತಾಪನೆ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಬೆಂಗಳೂರು ಡಿಸಿಪಿ ಡಿ.ದೇವರಾಜ್ ಮಾತನಾಡಿ, ಯಾವುದೇ ಸಮಾಜದಲ್ಲಿ ಆದರೂ ಮಕ್ಕಳನ್ನು ಗುರುತಿಸಿ ವಿದ್ಯಾಭ್ಯಾಸದಲ್ಲಿ ಪೋತ್ಸಾಹಿಸಿದಾಗ ಸಮುದಾಯ ಅಭಿವೃದ್ಧಿ ಹೊಂದುವಂತೆ ಮಾಡಲು ಸಾಧ್ಯ ಮಕ್ಕಳು ಸಾಧನೆ ಮಾಡಿದಾಗ ಗುರುತಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆ ಅದೇ ಕ್ಷೇತ್ರದ ಕಡೆಗೆ ಒಲವು ತೋರಿಸಬೇಕು ಒಂದಿಷ್ಟು ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ದಾರಿ ತೋರಿಸಬೇಕು ಎಂದರು.
ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ನಾಮಧಾರಿ ನಗರ್ತ ಫೌಂಡೇಶನ್ ಅಧ್ಯಕ್ಷ ಜಿ.ಆನಂದಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಗರಸಭೆ ನಿವೃತ್ತ ಪೌರಾಯುಕ್ತ ರಾಮಪ್ರಸಾದ್, ಮುಖಂಡರಾದ ವಿಶ್ವನಾಥ್, ರಾಮಕೃಷ್ಣ, ನಾಗರಾಜಶೆಟ್ಟಿ, ಮಂಜುನಾಥ್ ಮುಳಬಾಗಿಲು ನಗರಸಭೆ ಸದಸ್ಯ ಪ್ರಸಾದ್, ಜಯರಾಮ್, ಸೋಮಶೇಖರ್, ಸರೋಜ ಮುಂತಾದವರು ಇದ್ದರು
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…