Categories: ಕೋಲಾರ

ಸಣ್ಣ ಸಮುದಾಯಗಳಿಗೆ ಪೋತ್ಸಾಹ ಅಗತ್ಯ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಮಾಜದಲ್ಲಿ ಸಣ್ಣಪುಟ್ಟ ಸಮುದಾಯಗಳನ್ನು ಪೋತ್ಸಾಹಿಸಿ ಬೆಂಬಲಿಸಿದಾಗ ಮಾತ್ರವೇ ಅ ಸಮುದಾಯಗಳು ಕೂಡ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ನಗರದ ಕೆ.ವಿ.ಆರ್.ಸಿ ಸಮುದಾಯ ಭವನದಲ್ಲಿ ಭಾನುವಾರ ನಾಮಧಾರಿ ನಗರ್ತ ಫೌಂಡೇಶನ್ ವತಿಯಿಂದ ಸಮುದಾಯದ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ವಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಸುಮಾರು 71 ಸಣ್ಣಪುಟ್ಟ ಅಲೆಮಾರಿ ಸಮುದಾಯಗಳು ಇದ್ದು ಅವರು ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿ ಗುರುತಿಸಿಕೊಳ್ಳಬೇಕಾಗಿದೆ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿ ಉನ್ನತ ಮಟ್ಟದ ಅಧಿಕಾರಿಗಳಾಗಿ ಮಾಡುವ ಜವಾಬ್ದಾರಿ ಸಮುದಾಯದ ಮುಖಂಡರ ಮೇಲೆ ಇದೆ ಎಂದರು.

ಸಣ್ಣಪುಟ್ಟ ಸಮುದಾಯಗಳು ಮುಖ್ಯವಾಹಿನಿಗೆ ಬಂದು ಸದೃಢರಾಗಬೇಕಬೇಕಾದರೆ ಮೊದಲು ಶಿಕ್ಷಣ ಮತ್ತು ಉದ್ಯೋಗದಿಂದ ಸಾಧ್ಯ ಸಮುದಾಯದ ನಿರಂತರ ಕಾರ್ಯಕ್ರಮಗಳಿಗೆ ಸಮುದಾಯ ಭವನವನ್ನು ನಿರ್ಮಿಸಲು ಜಾಗವನ್ನು ನೀಡಲಾಗುತ್ತದೆ ಜೊತೆಗೆ ಅನುದಾನವನ್ನು ಕೊಡಲಾಗುತ್ತದೆ ಜೊತೆಗೆ ಮಕ್ಕಳ ಶೈಕ್ಷಣಿಕ ವಿಧ್ಯಾಭ್ಯಾಸಕ್ಕಾಗಿ ಹಾಸ್ಟಲ್ ವ್ಯವಸ್ಥೆ ಮಾಡಲಾಗುತ್ತದೆ ಕೂಡಲೇ ಸರ್ಕಾರದೊಂದಿಗೆ ಪ್ರಸ್ತಾಪನೆ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಪುಟ್ಟ ಸಮುದಾಯದವರು ಎಂಬ ಮೇಲುಕೀಳು ಇಲ್ಲದೇ ಸಮಾಜದಲ್ಲಿ ಪ್ರಯತ್ನಗಳನ್ನು ಮಾಡಿ ಯಶಸ್ಸು ಗಳಿಸಬೇಕು ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕಿದೆ, ಎಲ್ಲರಂತೆ ಸಮಾಜದ ಮುಖ್ಯವಾಹಿನಿಗೆ ಬರುವ ಗುರಿಯನ್ನು ಇಟ್ಟುಕೊಳ್ಳಬೇಕು, ಸಣ್ಣಪುಟ್ಟ ಸಮಾಜದಲ್ಲಿ ಮಾತ್ರವೇ ಒಗ್ಗಟ್ಟು ಹೆಚ್ಚಾಗಿದ್ದು ಮಕ್ಕಳನ್ನು ಶೈಕ್ಷಣಿಕವಾಗಿ ಮುಂದೆ ತಂದು ತಮ್ಮ ಗುರಿಯನ್ನು ಸಾಧಿಸಲು ಪೋತ್ಸಾಹ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ಡಿಸಿಪಿ ಡಿ.ದೇವರಾಜ್ ಮಾತನಾಡಿ, ಯಾವುದೇ ಸಮಾಜದಲ್ಲಿ ಆದರೂ ಮಕ್ಕಳನ್ನು ಗುರುತಿಸಿ ವಿದ್ಯಾಭ್ಯಾಸದಲ್ಲಿ ಪೋತ್ಸಾಹಿಸಿದಾಗ ಸಮುದಾಯ ಅಭಿವೃದ್ಧಿ ಹೊಂದುವಂತೆ ಮಾಡಲು ಸಾಧ್ಯ ಮಕ್ಕಳು ಸಾಧನೆ ಮಾಡಿದಾಗ ಗುರುತಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆ ಅದೇ ಕ್ಷೇತ್ರದ ಕಡೆಗೆ ಒಲವು ತೋರಿಸಬೇಕು ಒಂದಿಷ್ಟು ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ದಾರಿ ತೋರಿಸಬೇಕು ಎಂದರು.

ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ನಾಮಧಾರಿ ನಗರ್ತ ಫೌಂಡೇಶನ್ ಅಧ್ಯಕ್ಷ ಜಿ.ಆನಂದಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಗರಸಭೆ ನಿವೃತ್ತ ಪೌರಾಯುಕ್ತ ರಾಮಪ್ರಸಾದ್, ಮುಖಂಡರಾದ ವಿಶ್ವನಾಥ್, ರಾಮಕೃಷ್ಣ, ನಾಗರಾಜಶೆಟ್ಟಿ, ಮಂಜುನಾಥ್ ಮುಳಬಾಗಿಲು ನಗರಸಭೆ ಸದಸ್ಯ ಪ್ರಸಾದ್, ಜಯರಾಮ್, ಸೋಮಶೇಖರ್, ಸರೋಜ ಮುಂತಾದವರು ಇದ್ದರು

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

9 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

14 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago