ಕೋಲಾರ: ಸಮಾಜದಲ್ಲಿ ಸಣ್ಣಪುಟ್ಟ ಸಮುದಾಯಗಳನ್ನು ಪೋತ್ಸಾಹಿಸಿ ಬೆಂಬಲಿಸಿದಾಗ ಮಾತ್ರವೇ ಅ ಸಮುದಾಯಗಳು ಕೂಡ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.
ನಗರದ ಕೆ.ವಿ.ಆರ್.ಸಿ ಸಮುದಾಯ ಭವನದಲ್ಲಿ ಭಾನುವಾರ ನಾಮಧಾರಿ ನಗರ್ತ ಫೌಂಡೇಶನ್ ವತಿಯಿಂದ ಸಮುದಾಯದ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ವಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಸುಮಾರು 71 ಸಣ್ಣಪುಟ್ಟ ಅಲೆಮಾರಿ ಸಮುದಾಯಗಳು ಇದ್ದು ಅವರು ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿ ಗುರುತಿಸಿಕೊಳ್ಳಬೇಕಾಗಿದೆ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿ ಉನ್ನತ ಮಟ್ಟದ ಅಧಿಕಾರಿಗಳಾಗಿ ಮಾಡುವ ಜವಾಬ್ದಾರಿ ಸಮುದಾಯದ ಮುಖಂಡರ ಮೇಲೆ ಇದೆ ಎಂದರು.
ಸಣ್ಣಪುಟ್ಟ ಸಮುದಾಯಗಳು ಮುಖ್ಯವಾಹಿನಿಗೆ ಬಂದು ಸದೃಢರಾಗಬೇಕಬೇಕಾದರೆ ಮೊದಲು ಶಿಕ್ಷಣ ಮತ್ತು ಉದ್ಯೋಗದಿಂದ ಸಾಧ್ಯ ಸಮುದಾಯದ ನಿರಂತರ ಕಾರ್ಯಕ್ರಮಗಳಿಗೆ ಸಮುದಾಯ ಭವನವನ್ನು ನಿರ್ಮಿಸಲು ಜಾಗವನ್ನು ನೀಡಲಾಗುತ್ತದೆ ಜೊತೆಗೆ ಅನುದಾನವನ್ನು ಕೊಡಲಾಗುತ್ತದೆ ಜೊತೆಗೆ ಮಕ್ಕಳ ಶೈಕ್ಷಣಿಕ ವಿಧ್ಯಾಭ್ಯಾಸಕ್ಕಾಗಿ ಹಾಸ್ಟಲ್ ವ್ಯವಸ್ಥೆ ಮಾಡಲಾಗುತ್ತದೆ ಕೂಡಲೇ ಸರ್ಕಾರದೊಂದಿಗೆ ಪ್ರಸ್ತಾಪನೆ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಬೆಂಗಳೂರು ಡಿಸಿಪಿ ಡಿ.ದೇವರಾಜ್ ಮಾತನಾಡಿ, ಯಾವುದೇ ಸಮಾಜದಲ್ಲಿ ಆದರೂ ಮಕ್ಕಳನ್ನು ಗುರುತಿಸಿ ವಿದ್ಯಾಭ್ಯಾಸದಲ್ಲಿ ಪೋತ್ಸಾಹಿಸಿದಾಗ ಸಮುದಾಯ ಅಭಿವೃದ್ಧಿ ಹೊಂದುವಂತೆ ಮಾಡಲು ಸಾಧ್ಯ ಮಕ್ಕಳು ಸಾಧನೆ ಮಾಡಿದಾಗ ಗುರುತಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆ ಅದೇ ಕ್ಷೇತ್ರದ ಕಡೆಗೆ ಒಲವು ತೋರಿಸಬೇಕು ಒಂದಿಷ್ಟು ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ದಾರಿ ತೋರಿಸಬೇಕು ಎಂದರು.
ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ನಾಮಧಾರಿ ನಗರ್ತ ಫೌಂಡೇಶನ್ ಅಧ್ಯಕ್ಷ ಜಿ.ಆನಂದಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಗರಸಭೆ ನಿವೃತ್ತ ಪೌರಾಯುಕ್ತ ರಾಮಪ್ರಸಾದ್, ಮುಖಂಡರಾದ ವಿಶ್ವನಾಥ್, ರಾಮಕೃಷ್ಣ, ನಾಗರಾಜಶೆಟ್ಟಿ, ಮಂಜುನಾಥ್ ಮುಳಬಾಗಿಲು ನಗರಸಭೆ ಸದಸ್ಯ ಪ್ರಸಾದ್, ಜಯರಾಮ್, ಸೋಮಶೇಖರ್, ಸರೋಜ ಮುಂತಾದವರು ಇದ್ದರು
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…