ರಾಜ್ಯದ ಹಲವು ಕಡೆ ಕಳೆದ ಕೆಲ ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಅದೇ ರೀತಿ.. ಬೆಂಗಳೂರು ನಗರದ ಕೂಗಳತೆ ದೂರಲ್ಲಿರುವ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿಯಲ್ಲಿ ರೈತ ತಾನು ಬೆಳೆದ ಹೂ ಗಿಡಳನ್ನು ಬುಡಸಮೇತ ಕಿತ್ತು ಹಾಕಿ ಸಂಕಷ್ಟಕ್ಕೀಡಾಗಿದ್ದಾನೆ.
ಶ್ರೀಕಾಂತ್ ಮತ್ತು ನರಸೇಗೌಡ ಎಂಬ ರೈತರು ಒಂದು ಎಕರೆ ಜಮೀನಿನಲ್ಲಿ ಬೆಳೆದ ಸಿಲೋಷಿಯಾ ಎಂಬ ಅಲಂಕಾರಿಕ ಹೂಗಳು ಮಳೆಯಿಂದಾಗಿ ಬುಡದಲ್ಲೇ ಕೊಳೆತಿವೆ. ಹಾಗಾಗಿ ದಿಕ್ಕು ತೋಚದೆ, ಹೂಗಿಡಗಳನ್ನು ಆಳುಗಳನ್ನಿಟ್ಟು ಕಿತ್ತು ಹಾಕಿಸಿದ್ದಾರೆ…
ಒಂದು ಎಕರೆ ಜಮೀನಿನಲ್ಲಿ, ಸುಮಾರು 8 ಲಕ್ಷ ಹಣ ಖರ್ಚು ಮಾಡಿ ಸಿಲೋಷಿಯಾ ಎಂಬ ಅಲಂಕಾರಿಕ ಹೂಗಳನ್ನು ಬೆಳೆಯಲಾಗಿತ್ತು. ಈ ಹೂಗಳನ್ನು ಬೆಂಗಳೂರು ಕೊಲ್ಕತ್ತಾ, ಬಾಂಬೆ, ಮುಂಬೈ, ಹೈದರಾಬಾದ್, ರಾಜ್ಯಗಳಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಫ್ತು ಮಾಡಲಾಗುತ್ತಿತ್ತು. ಅಲಂಕಾರಿಕ ಹೂಗಳಾಗಿದ್ದರಿಂದ ಅತೀ ಹೆಚ್ಚಿನ ಬೆಲೆಗೆ ಮಾರಾಟವಾಗುವ ನಿರೀಕ್ಷೆಯಿತ್ತು. ಆದರೆ, ಸತತವಾಗಿ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಸಂಪೂರ್ಣ ಬೆಳೆ ನಷ್ಟವಾಗಿದೆ. ಒಂದು ಬಾರಿಯೂ ಕಟಾವು ಮಾಡದೆ, ಈಗ ತಿಪ್ಪೆಗೆ ಹಾಕುವಂತೆ ಆಗಿದೆ.
ಒಟ್ಟಾರೆ ನೂರಾರು ಕನಸುಗಳನ್ನು ಕಟ್ಟಿಕೊಂಡು ಮಗುವಿನ ರೀತಿ ಬೆಳೆದಿದ್ದ ಹೂ ಗಿಡಗಳನ್ನು ಇವತ್ತು ರೈತ ತನ್ನ ಕೈಯಾರೆ ಕಿತ್ತು ಹಾಕುವಂತ ಸ್ಥಿತಿ ಬಂದಿದ್ದು ಮಾತ್ರ ವಿಪರ್ಯಾಸ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ನಷ್ಟ ಪರಿಹಾರ ನೀಡುತ್ತಾ ಕಾದು ನೋಡಬೇಕಿದೆ.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…