ರಾಜ್ಯದ ಹಲವು ಕಡೆ ಕಳೆದ ಕೆಲ ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಅದೇ ರೀತಿ.. ಬೆಂಗಳೂರು ನಗರದ ಕೂಗಳತೆ ದೂರಲ್ಲಿರುವ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿಯಲ್ಲಿ ರೈತ ತಾನು ಬೆಳೆದ ಹೂ ಗಿಡಳನ್ನು ಬುಡಸಮೇತ ಕಿತ್ತು ಹಾಕಿ ಸಂಕಷ್ಟಕ್ಕೀಡಾಗಿದ್ದಾನೆ.
ಶ್ರೀಕಾಂತ್ ಮತ್ತು ನರಸೇಗೌಡ ಎಂಬ ರೈತರು ಒಂದು ಎಕರೆ ಜಮೀನಿನಲ್ಲಿ ಬೆಳೆದ ಸಿಲೋಷಿಯಾ ಎಂಬ ಅಲಂಕಾರಿಕ ಹೂಗಳು ಮಳೆಯಿಂದಾಗಿ ಬುಡದಲ್ಲೇ ಕೊಳೆತಿವೆ. ಹಾಗಾಗಿ ದಿಕ್ಕು ತೋಚದೆ, ಹೂಗಿಡಗಳನ್ನು ಆಳುಗಳನ್ನಿಟ್ಟು ಕಿತ್ತು ಹಾಕಿಸಿದ್ದಾರೆ…
ಒಂದು ಎಕರೆ ಜಮೀನಿನಲ್ಲಿ, ಸುಮಾರು 8 ಲಕ್ಷ ಹಣ ಖರ್ಚು ಮಾಡಿ ಸಿಲೋಷಿಯಾ ಎಂಬ ಅಲಂಕಾರಿಕ ಹೂಗಳನ್ನು ಬೆಳೆಯಲಾಗಿತ್ತು. ಈ ಹೂಗಳನ್ನು ಬೆಂಗಳೂರು ಕೊಲ್ಕತ್ತಾ, ಬಾಂಬೆ, ಮುಂಬೈ, ಹೈದರಾಬಾದ್, ರಾಜ್ಯಗಳಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಫ್ತು ಮಾಡಲಾಗುತ್ತಿತ್ತು. ಅಲಂಕಾರಿಕ ಹೂಗಳಾಗಿದ್ದರಿಂದ ಅತೀ ಹೆಚ್ಚಿನ ಬೆಲೆಗೆ ಮಾರಾಟವಾಗುವ ನಿರೀಕ್ಷೆಯಿತ್ತು. ಆದರೆ, ಸತತವಾಗಿ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಸಂಪೂರ್ಣ ಬೆಳೆ ನಷ್ಟವಾಗಿದೆ. ಒಂದು ಬಾರಿಯೂ ಕಟಾವು ಮಾಡದೆ, ಈಗ ತಿಪ್ಪೆಗೆ ಹಾಕುವಂತೆ ಆಗಿದೆ.
ಒಟ್ಟಾರೆ ನೂರಾರು ಕನಸುಗಳನ್ನು ಕಟ್ಟಿಕೊಂಡು ಮಗುವಿನ ರೀತಿ ಬೆಳೆದಿದ್ದ ಹೂ ಗಿಡಗಳನ್ನು ಇವತ್ತು ರೈತ ತನ್ನ ಕೈಯಾರೆ ಕಿತ್ತು ಹಾಕುವಂತ ಸ್ಥಿತಿ ಬಂದಿದ್ದು ಮಾತ್ರ ವಿಪರ್ಯಾಸ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ನಷ್ಟ ಪರಿಹಾರ ನೀಡುತ್ತಾ ಕಾದು ನೋಡಬೇಕಿದೆ.
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…