ಸತತ ಮಳೆ….ಬುಡದಲ್ಲೇ ಕೊಳೆಯುತ್ತಿರುವ ಅಲಂಕಾರಿಕ ಹೂ: ಕೊಳೆತ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿದ ರೈತ

ರಾಜ್ಯದ ಹಲವು ಕಡೆ ಕಳೆದ ಕೆಲ ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಜನ‌ಜೀವನ ಅಸ್ತವ್ಯಸ್ಥಗೊಂಡಿದೆ.

ಕಳೆದೆರಡು ತಿಂಗಳಿಂದ ಮಳೆಯಿಲ್ಲದೆ ಪರದಾಡುತ್ತಿದ್ದ ರೈತರು.. ಈಗ ಬಿಟ್ಟು ಬಿಡದೆ ಧೋ ಎಂದು ಸುರಿಯಿತ್ತಿರುವ ಮಳೆಗೆ ಹೈರಣಾಗಿ ಹೋಗಿದ್ದಾರೆ. ಅರೆಬರೆ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಈಗ ಮಳೆಯಿಂದ ಅದು ಕೂಡ ಕೈತಪ್ಪಿ ಹೋಗುವ ಭೀತಿಯಲ್ಲಿದ್ದಾರೆ. ರೈತರು ಬೆಳೆದ ಬೆಳೆಗಳು ಅತಿಯಾದ ತೇವಾಂಶದಿಂದ ನೆಲಕಚ್ಚುತ್ತಿವೆ.

ಅದೇ ರೀತಿ.. ಬೆಂಗಳೂರು‌ ನಗರದ ಕೂಗಳತೆ ದೂರಲ್ಲಿರುವ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿಯಲ್ಲಿ ರೈತ ತಾನು ಬೆಳೆದ ಹೂ ಗಿಡಳನ್ನು ಬುಡಸಮೇತ ಕಿತ್ತು ಹಾಕಿ ಸಂಕಷ್ಟಕ್ಕೀಡಾಗಿದ್ದಾನೆ.

ಶ್ರೀಕಾಂತ್ ಮತ್ತು ನರಸೇಗೌಡ ಎಂಬ ರೈತರು ಒಂದು ಎಕರೆ ಜಮೀನಿನಲ್ಲಿ ಬೆಳೆದ ಸಿಲೋಷಿಯಾ ಎಂಬ ಅಲಂಕಾರಿಕ ಹೂಗಳು ಮಳೆಯಿಂದಾಗಿ ಬುಡದಲ್ಲೇ ಕೊಳೆತಿವೆ‌. ಹಾಗಾಗಿ ದಿಕ್ಕು ತೋಚದೆ, ಹೂಗಿಡಗಳನ್ನು ಆಳುಗಳನ್ನಿಟ್ಟು ಕಿತ್ತು ಹಾಕಿಸಿದ್ದಾರೆ…

ಒಂದು ಎಕರೆ ಜಮೀನಿನಲ್ಲಿ, ಸುಮಾರು 8 ಲಕ್ಷ ಹಣ ಖರ್ಚು ಮಾಡಿ ಸಿಲೋಷಿಯಾ ಎಂಬ ಅಲಂಕಾರಿಕ ಹೂಗಳನ್ನು ಬೆಳೆಯಲಾಗಿತ್ತು. ಈ ಹೂಗಳನ್ನು ಬೆಂಗಳೂರು ಕೊಲ್ಕತ್ತಾ, ಬಾಂಬೆ, ಮುಂಬೈ, ಹೈದರಾಬಾದ್, ರಾಜ್ಯಗಳಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಫ್ತು ಮಾಡಲಾಗುತ್ತಿತ್ತು. ಅಲಂಕಾರಿಕ ಹೂಗಳಾಗಿದ್ದರಿಂದ ಅತೀ ಹೆಚ್ಚಿನ ಬೆಲೆಗೆ ಮಾರಾಟವಾಗುವ ನಿರೀಕ್ಷೆಯಿತ್ತು. ಆದರೆ, ಸತತವಾಗಿ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಸಂಪೂರ್ಣ ಬೆಳೆ ನಷ್ಟವಾಗಿದೆ. ಒಂದು ಬಾರಿಯೂ ಕಟಾವು ಮಾಡದೆ, ಈಗ ತಿಪ್ಪೆಗೆ ಹಾಕುವಂತೆ ಆಗಿದೆ.

ಬೆಳೆ ಕೈ ಸೇರಲು 3 ತಿಂಗಳ ಕಾಲ ಮಗುವಿನ ರೀತಿ ಪೋಷಣೆ ಮಾಡಬೇಕಾಗುತ್ತದೆ. ಕಷ್ಟಪಟ್ಟು ಬೆಳೆದ ಬೆಳೆ ಇನ್ನೇನು ಕೈ ಸೇರುತ್ತದೆ ಎನ್ನುವಷ್ಟರಲ್ಲಿ ಈ ರೀತಿ ಪ್ರಕೃತಿ ವಿಕೋಪದಿಂದ ನಾಶವಾದರೆ ರೈತರು ಬದುಕುವುದು ಹೇಗೆ ಎಂದು ರೈತ ಅಳಲನ್ನು ತೋಡಿಕೊಂಡಿದ್ದಾರೆ. ಅಲ್ಲದೆ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಕೂಡ ಯಾರೂ ಸ್ಥಳ ಪರಿಶೀಲನೆ ಮಾಡಿಲ್ಲ ಎಂದು ರೈತ  ನರಸೇಗೌಡ ಆಕ್ರೋಶ ಹೊರಹಾಕಿದ್ದಾರೆ.

ಒಟ್ಟಾರೆ ನೂರಾರು ಕನಸುಗಳನ್ನು ಕಟ್ಟಿಕೊಂಡು ಮಗುವಿನ ರೀತಿ ಬೆಳೆದಿದ್ದ ಹೂ ಗಿಡಗಳನ್ನು ಇವತ್ತು ರೈತ ತನ್ನ ಕೈಯಾರೆ ಕಿತ್ತು ಹಾಕುವಂತ ಸ್ಥಿತಿ ಬಂದಿದ್ದು ಮಾತ್ರ ವಿಪರ್ಯಾಸ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ‌ ಪರಿಶೀಲನೆ ಮಾಡಿ ನಷ್ಟ ಪರಿಹಾರ ನೀಡುತ್ತಾ ಕಾದು ನೋಡಬೇಕಿದೆ.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

8 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

9 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

14 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

16 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

19 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago