ರಾಜ್ಯದ ಹಲವು ಕಡೆ ಕಳೆದ ಕೆಲ ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಅದೇ ರೀತಿ.. ಬೆಂಗಳೂರು ನಗರದ ಕೂಗಳತೆ ದೂರಲ್ಲಿರುವ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿಯಲ್ಲಿ ರೈತ ತಾನು ಬೆಳೆದ ಹೂ ಗಿಡಳನ್ನು ಬುಡಸಮೇತ ಕಿತ್ತು ಹಾಕಿ ಸಂಕಷ್ಟಕ್ಕೀಡಾಗಿದ್ದಾನೆ.
ಶ್ರೀಕಾಂತ್ ಮತ್ತು ನರಸೇಗೌಡ ಎಂಬ ರೈತರು ಒಂದು ಎಕರೆ ಜಮೀನಿನಲ್ಲಿ ಬೆಳೆದ ಸಿಲೋಷಿಯಾ ಎಂಬ ಅಲಂಕಾರಿಕ ಹೂಗಳು ಮಳೆಯಿಂದಾಗಿ ಬುಡದಲ್ಲೇ ಕೊಳೆತಿವೆ. ಹಾಗಾಗಿ ದಿಕ್ಕು ತೋಚದೆ, ಹೂಗಿಡಗಳನ್ನು ಆಳುಗಳನ್ನಿಟ್ಟು ಕಿತ್ತು ಹಾಕಿಸಿದ್ದಾರೆ…
ಒಂದು ಎಕರೆ ಜಮೀನಿನಲ್ಲಿ, ಸುಮಾರು 8 ಲಕ್ಷ ಹಣ ಖರ್ಚು ಮಾಡಿ ಸಿಲೋಷಿಯಾ ಎಂಬ ಅಲಂಕಾರಿಕ ಹೂಗಳನ್ನು ಬೆಳೆಯಲಾಗಿತ್ತು. ಈ ಹೂಗಳನ್ನು ಬೆಂಗಳೂರು ಕೊಲ್ಕತ್ತಾ, ಬಾಂಬೆ, ಮುಂಬೈ, ಹೈದರಾಬಾದ್, ರಾಜ್ಯಗಳಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಫ್ತು ಮಾಡಲಾಗುತ್ತಿತ್ತು. ಅಲಂಕಾರಿಕ ಹೂಗಳಾಗಿದ್ದರಿಂದ ಅತೀ ಹೆಚ್ಚಿನ ಬೆಲೆಗೆ ಮಾರಾಟವಾಗುವ ನಿರೀಕ್ಷೆಯಿತ್ತು. ಆದರೆ, ಸತತವಾಗಿ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಸಂಪೂರ್ಣ ಬೆಳೆ ನಷ್ಟವಾಗಿದೆ. ಒಂದು ಬಾರಿಯೂ ಕಟಾವು ಮಾಡದೆ, ಈಗ ತಿಪ್ಪೆಗೆ ಹಾಕುವಂತೆ ಆಗಿದೆ.
ಒಟ್ಟಾರೆ ನೂರಾರು ಕನಸುಗಳನ್ನು ಕಟ್ಟಿಕೊಂಡು ಮಗುವಿನ ರೀತಿ ಬೆಳೆದಿದ್ದ ಹೂ ಗಿಡಗಳನ್ನು ಇವತ್ತು ರೈತ ತನ್ನ ಕೈಯಾರೆ ಕಿತ್ತು ಹಾಕುವಂತ ಸ್ಥಿತಿ ಬಂದಿದ್ದು ಮಾತ್ರ ವಿಪರ್ಯಾಸ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ನಷ್ಟ ಪರಿಹಾರ ನೀಡುತ್ತಾ ಕಾದು ನೋಡಬೇಕಿದೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…