ರಾಜ್ಯದ ಹಲವು ಕಡೆ ಕಳೆದ ಕೆಲ ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಅದೇ ರೀತಿ.. ಬೆಂಗಳೂರು ನಗರದ ಕೂಗಳತೆ ದೂರಲ್ಲಿರುವ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿಯಲ್ಲಿ ರೈತ ತಾನು ಬೆಳೆದ ಹೂ ಗಿಡಳನ್ನು ಬುಡಸಮೇತ ಕಿತ್ತು ಹಾಕಿ ಸಂಕಷ್ಟಕ್ಕೀಡಾಗಿದ್ದಾನೆ.
ಶ್ರೀಕಾಂತ್ ಮತ್ತು ನರಸೇಗೌಡ ಎಂಬ ರೈತರು ಒಂದು ಎಕರೆ ಜಮೀನಿನಲ್ಲಿ ಬೆಳೆದ ಸಿಲೋಷಿಯಾ ಎಂಬ ಅಲಂಕಾರಿಕ ಹೂಗಳು ಮಳೆಯಿಂದಾಗಿ ಬುಡದಲ್ಲೇ ಕೊಳೆತಿವೆ. ಹಾಗಾಗಿ ದಿಕ್ಕು ತೋಚದೆ, ಹೂಗಿಡಗಳನ್ನು ಆಳುಗಳನ್ನಿಟ್ಟು ಕಿತ್ತು ಹಾಕಿಸಿದ್ದಾರೆ…
ಒಂದು ಎಕರೆ ಜಮೀನಿನಲ್ಲಿ, ಸುಮಾರು 8 ಲಕ್ಷ ಹಣ ಖರ್ಚು ಮಾಡಿ ಸಿಲೋಷಿಯಾ ಎಂಬ ಅಲಂಕಾರಿಕ ಹೂಗಳನ್ನು ಬೆಳೆಯಲಾಗಿತ್ತು. ಈ ಹೂಗಳನ್ನು ಬೆಂಗಳೂರು ಕೊಲ್ಕತ್ತಾ, ಬಾಂಬೆ, ಮುಂಬೈ, ಹೈದರಾಬಾದ್, ರಾಜ್ಯಗಳಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಫ್ತು ಮಾಡಲಾಗುತ್ತಿತ್ತು. ಅಲಂಕಾರಿಕ ಹೂಗಳಾಗಿದ್ದರಿಂದ ಅತೀ ಹೆಚ್ಚಿನ ಬೆಲೆಗೆ ಮಾರಾಟವಾಗುವ ನಿರೀಕ್ಷೆಯಿತ್ತು. ಆದರೆ, ಸತತವಾಗಿ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಸಂಪೂರ್ಣ ಬೆಳೆ ನಷ್ಟವಾಗಿದೆ. ಒಂದು ಬಾರಿಯೂ ಕಟಾವು ಮಾಡದೆ, ಈಗ ತಿಪ್ಪೆಗೆ ಹಾಕುವಂತೆ ಆಗಿದೆ.
ಒಟ್ಟಾರೆ ನೂರಾರು ಕನಸುಗಳನ್ನು ಕಟ್ಟಿಕೊಂಡು ಮಗುವಿನ ರೀತಿ ಬೆಳೆದಿದ್ದ ಹೂ ಗಿಡಗಳನ್ನು ಇವತ್ತು ರೈತ ತನ್ನ ಕೈಯಾರೆ ಕಿತ್ತು ಹಾಕುವಂತ ಸ್ಥಿತಿ ಬಂದಿದ್ದು ಮಾತ್ರ ವಿಪರ್ಯಾಸ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ನಷ್ಟ ಪರಿಹಾರ ನೀಡುತ್ತಾ ಕಾದು ನೋಡಬೇಕಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…