ಸತತ ಮಳೆ….ಬುಡದಲ್ಲೇ ಕೊಳೆಯುತ್ತಿರುವ ಅಲಂಕಾರಿಕ ಹೂ: ಕೊಳೆತ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿದ ರೈತ

ರಾಜ್ಯದ ಹಲವು ಕಡೆ ಕಳೆದ ಕೆಲ ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಜನ‌ಜೀವನ ಅಸ್ತವ್ಯಸ್ಥಗೊಂಡಿದೆ.

ಕಳೆದೆರಡು ತಿಂಗಳಿಂದ ಮಳೆಯಿಲ್ಲದೆ ಪರದಾಡುತ್ತಿದ್ದ ರೈತರು.. ಈಗ ಬಿಟ್ಟು ಬಿಡದೆ ಧೋ ಎಂದು ಸುರಿಯಿತ್ತಿರುವ ಮಳೆಗೆ ಹೈರಣಾಗಿ ಹೋಗಿದ್ದಾರೆ. ಅರೆಬರೆ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಈಗ ಮಳೆಯಿಂದ ಅದು ಕೂಡ ಕೈತಪ್ಪಿ ಹೋಗುವ ಭೀತಿಯಲ್ಲಿದ್ದಾರೆ. ರೈತರು ಬೆಳೆದ ಬೆಳೆಗಳು ಅತಿಯಾದ ತೇವಾಂಶದಿಂದ ನೆಲಕಚ್ಚುತ್ತಿವೆ.

ಅದೇ ರೀತಿ.. ಬೆಂಗಳೂರು‌ ನಗರದ ಕೂಗಳತೆ ದೂರಲ್ಲಿರುವ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿಯಲ್ಲಿ ರೈತ ತಾನು ಬೆಳೆದ ಹೂ ಗಿಡಳನ್ನು ಬುಡಸಮೇತ ಕಿತ್ತು ಹಾಕಿ ಸಂಕಷ್ಟಕ್ಕೀಡಾಗಿದ್ದಾನೆ.

ಶ್ರೀಕಾಂತ್ ಮತ್ತು ನರಸೇಗೌಡ ಎಂಬ ರೈತರು ಒಂದು ಎಕರೆ ಜಮೀನಿನಲ್ಲಿ ಬೆಳೆದ ಸಿಲೋಷಿಯಾ ಎಂಬ ಅಲಂಕಾರಿಕ ಹೂಗಳು ಮಳೆಯಿಂದಾಗಿ ಬುಡದಲ್ಲೇ ಕೊಳೆತಿವೆ‌. ಹಾಗಾಗಿ ದಿಕ್ಕು ತೋಚದೆ, ಹೂಗಿಡಗಳನ್ನು ಆಳುಗಳನ್ನಿಟ್ಟು ಕಿತ್ತು ಹಾಕಿಸಿದ್ದಾರೆ…

ಒಂದು ಎಕರೆ ಜಮೀನಿನಲ್ಲಿ, ಸುಮಾರು 8 ಲಕ್ಷ ಹಣ ಖರ್ಚು ಮಾಡಿ ಸಿಲೋಷಿಯಾ ಎಂಬ ಅಲಂಕಾರಿಕ ಹೂಗಳನ್ನು ಬೆಳೆಯಲಾಗಿತ್ತು. ಈ ಹೂಗಳನ್ನು ಬೆಂಗಳೂರು ಕೊಲ್ಕತ್ತಾ, ಬಾಂಬೆ, ಮುಂಬೈ, ಹೈದರಾಬಾದ್, ರಾಜ್ಯಗಳಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಫ್ತು ಮಾಡಲಾಗುತ್ತಿತ್ತು. ಅಲಂಕಾರಿಕ ಹೂಗಳಾಗಿದ್ದರಿಂದ ಅತೀ ಹೆಚ್ಚಿನ ಬೆಲೆಗೆ ಮಾರಾಟವಾಗುವ ನಿರೀಕ್ಷೆಯಿತ್ತು. ಆದರೆ, ಸತತವಾಗಿ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಸಂಪೂರ್ಣ ಬೆಳೆ ನಷ್ಟವಾಗಿದೆ. ಒಂದು ಬಾರಿಯೂ ಕಟಾವು ಮಾಡದೆ, ಈಗ ತಿಪ್ಪೆಗೆ ಹಾಕುವಂತೆ ಆಗಿದೆ.

ಬೆಳೆ ಕೈ ಸೇರಲು 3 ತಿಂಗಳ ಕಾಲ ಮಗುವಿನ ರೀತಿ ಪೋಷಣೆ ಮಾಡಬೇಕಾಗುತ್ತದೆ. ಕಷ್ಟಪಟ್ಟು ಬೆಳೆದ ಬೆಳೆ ಇನ್ನೇನು ಕೈ ಸೇರುತ್ತದೆ ಎನ್ನುವಷ್ಟರಲ್ಲಿ ಈ ರೀತಿ ಪ್ರಕೃತಿ ವಿಕೋಪದಿಂದ ನಾಶವಾದರೆ ರೈತರು ಬದುಕುವುದು ಹೇಗೆ ಎಂದು ರೈತ ಅಳಲನ್ನು ತೋಡಿಕೊಂಡಿದ್ದಾರೆ. ಅಲ್ಲದೆ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಕೂಡ ಯಾರೂ ಸ್ಥಳ ಪರಿಶೀಲನೆ ಮಾಡಿಲ್ಲ ಎಂದು ರೈತ  ನರಸೇಗೌಡ ಆಕ್ರೋಶ ಹೊರಹಾಕಿದ್ದಾರೆ.

ಒಟ್ಟಾರೆ ನೂರಾರು ಕನಸುಗಳನ್ನು ಕಟ್ಟಿಕೊಂಡು ಮಗುವಿನ ರೀತಿ ಬೆಳೆದಿದ್ದ ಹೂ ಗಿಡಗಳನ್ನು ಇವತ್ತು ರೈತ ತನ್ನ ಕೈಯಾರೆ ಕಿತ್ತು ಹಾಕುವಂತ ಸ್ಥಿತಿ ಬಂದಿದ್ದು ಮಾತ್ರ ವಿಪರ್ಯಾಸ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ‌ ಪರಿಶೀಲನೆ ಮಾಡಿ ನಷ್ಟ ಪರಿಹಾರ ನೀಡುತ್ತಾ ಕಾದು ನೋಡಬೇಕಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago