Categories: ಲೇಖನ

ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ….

ಸತ್ಯ……..

ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ
ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….

ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ
ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….

ನಿಮ್ಮ ಬರಹಗಳಲ್ಲಿ ಅತ್ಯುತ್ತಮ ಪದ ಲಾಲಿತ್ಯ, ಭಾಷೆಯ ಸೊಗಡು, ಸಾಹಿತ್ಯ ನಲಿದಾಡುತ್ತಿದ್ದರೂ
ಸತ್ಯದ ಹುಡುಕಾಟ ನಿರಂತರವಾಗಿರಲಿ…..

ನಿಮ್ಮ ಪ್ರತಿಭೆ ಯಾವ ಪ್ರಕಾರದ ಕಲೆಯಲ್ಲಾದರೂ ಅರಳುತ್ತಿರಲಿ,
ಸತ್ಯದ ಹುಡುಕಾಟ ನಿರಂತರವಾಗಿರಲಿ…….

ನಿಮ್ಮ ಜ್ಞಾನದ ಮಟ್ಟ ತುಂಬಿ ಹರಿಯುತ್ತಿದ್ದರೂ
ಸತ್ಯದ ಹುಡುಕಾಟ ನಿರಂತರವಾಗಿರಲಿ‌…….

ಏಕೆಂದರೆ,
ಸತ್ಯ ಮಾತ್ರವೇ ಸೃಷ್ಟಿಯ, ಸಮಾಜದ ತಳಹದಿ,
ಸತ್ಯವೆಂಬುದೇ ಇದೆಲ್ಲದರ ಪ್ರತ್ಯಕ್ಷ, ಪರೋಕ್ಷ ಶಕ್ತಿ……,

ಸತ್ಯದ ಅಗ್ನಿ ಪರೀಕ್ಷೆಯಲ್ಲಿ ಇವು ಗೆದ್ದು ಬಂದಾಗ ಮಾತ್ರವೇ ಈ ಎಲ್ಲಾ ಸಾಧನೆಗಳಿಗೆ ಅರ್ಥ ಸಿಗುವುದು……

ನಿಮ್ಮ ಆತ್ಮಾವಲೋಕನದ ಮೂಲವೂ ಸತ್ಯವೇ ಆಗಿರಲಿ…..

ಸತ್ಯದ ಹುಡುಕಾಟದ ವಿಫಲತೆಯೇ ಇಂದಿನ ಸಮಾಜದ ಬಹುತೇಕ
ಸಮಸ್ಯೆಗಳ ಮೂಲ…..

ಅದು ರಾಜಕೀಯವಾಗಿರಲಿ, ಆಡಳಿತವಾಗಿರಲಿ, ಧಾರ್ಮಿಕವಾಗಿರಲಿ…..

ಸುಳ್ಳಿನ ಬುದ್ಧಿವಂತಿಕೆಯ ಪ್ರದರ್ಶನ ಹೆಚ್ಚಾಗಿ ಆಚರಣೆಗೆ ಬಂದು ಮನುಷ್ಯನ ಅಸ್ತಿತ್ವವೇ ಅನುಮಾನಕ್ಕೆ ಒಳಗಾಗಿದೆ…….

ಆತನ ವ್ಯಕ್ತಿತ್ವದ
ವಿಶ್ವಾಸಾರ್ಹತೆಯೇ ಪ್ರಶ್ನಾರ್ಥಕವಾಗಿದೆ…….

ಇಡೀ ಸಮಾಜ ವಾಸ್ತವಿಕ ಸತ್ಯ ಒಪ್ಪಿಕೊಂಡು ಮುಂದುವರೆದಲ್ಲಿ ,
ಖಂಡಿತವಾಗಿಯೂ ಈಗ ನಮ್ಮನ್ನು ಕಾಡುತ್ತಿರುವ ಬಹುತೇಕ ಸಮಸ್ಯೆಗಳು
ತನ್ನಿಂದ ತಾನೇ ಮಾಯವಾಗುತ್ತವೆ……

ಎಲ್ಲರೂ ಸತ್ಯ ಹರಿಶ್ಚಂದ್ರರಂತೆ ಆಗದಿದ್ದರೂ, ಕನಿಷ್ಠ
ಅನಾವಶ್ಯಕವಾದ ಮತ್ತು ಅಪಾಯಕಾರಿ ಸುಳ್ಳುಗಳಿಂದ ದೂರವಿದ್ದರೂ ಸಾಕು…..

ಅದೇ ನಮ್ಮ ವ್ಯಕ್ತಿತ್ವ ಉತ್ತಮಗೊಳ್ಳಲು ಮತ್ತು ಸಾಕಷ್ಟು ನೆಮ್ಮದಿಯ,
ಬದುಕಿಗೆ ಸಹಕಾರಿಯಾಗುತ್ತದೆ…..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……

ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

ಸಾರ್ವಕಾಲಿಕ ಸತ್ಯ,
ತಾತ್ಕಾಲಿಕ ಸತ್ಯ,
ಘಟನೆಯ ಸತ್ಯ,
ಸಾಂದರ್ಭಿಕ ಸತ್ಯ,
ಅರಿವಿನ ಸತ್ಯ,
ಊಹಾತ್ಮಕ ಸತ್ಯ, ವ್ಯಾವಹಾರಿಕ ಸತ್ಯ,
ಭಕ್ತಿ ಭಾವಗಳ ಸತ್ಯ,
ವೈಚಾರಿಕ ಸತ್ಯ,
ಈ ಕ್ಷಣದ ಸತ್ಯ,
ವಾಸ್ತವಿಕ ಸತ್ಯ……
ಹೀಗೆ ಸತ್ಯವೂ ಒಂದಷ್ಟು ರೂಪದಲ್ಲಿ ಸಿಗುತ್ತದೆ. ಸಮಗ್ರ ಚಿಂತನೆಯಿಂದ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದು……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

24 minutes ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

5 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

7 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

19 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

19 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

21 hours ago