Categories: ಲೇಖನ

ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ….

ಸತ್ಯ……..

ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ
ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….

ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ
ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….

ನಿಮ್ಮ ಬರಹಗಳಲ್ಲಿ ಅತ್ಯುತ್ತಮ ಪದ ಲಾಲಿತ್ಯ, ಭಾಷೆಯ ಸೊಗಡು, ಸಾಹಿತ್ಯ ನಲಿದಾಡುತ್ತಿದ್ದರೂ
ಸತ್ಯದ ಹುಡುಕಾಟ ನಿರಂತರವಾಗಿರಲಿ…..

ನಿಮ್ಮ ಪ್ರತಿಭೆ ಯಾವ ಪ್ರಕಾರದ ಕಲೆಯಲ್ಲಾದರೂ ಅರಳುತ್ತಿರಲಿ,
ಸತ್ಯದ ಹುಡುಕಾಟ ನಿರಂತರವಾಗಿರಲಿ…….

ನಿಮ್ಮ ಜ್ಞಾನದ ಮಟ್ಟ ತುಂಬಿ ಹರಿಯುತ್ತಿದ್ದರೂ
ಸತ್ಯದ ಹುಡುಕಾಟ ನಿರಂತರವಾಗಿರಲಿ‌…….

ಏಕೆಂದರೆ,
ಸತ್ಯ ಮಾತ್ರವೇ ಸೃಷ್ಟಿಯ, ಸಮಾಜದ ತಳಹದಿ,
ಸತ್ಯವೆಂಬುದೇ ಇದೆಲ್ಲದರ ಪ್ರತ್ಯಕ್ಷ, ಪರೋಕ್ಷ ಶಕ್ತಿ……,

ಸತ್ಯದ ಅಗ್ನಿ ಪರೀಕ್ಷೆಯಲ್ಲಿ ಇವು ಗೆದ್ದು ಬಂದಾಗ ಮಾತ್ರವೇ ಈ ಎಲ್ಲಾ ಸಾಧನೆಗಳಿಗೆ ಅರ್ಥ ಸಿಗುವುದು……

ನಿಮ್ಮ ಆತ್ಮಾವಲೋಕನದ ಮೂಲವೂ ಸತ್ಯವೇ ಆಗಿರಲಿ…..

ಸತ್ಯದ ಹುಡುಕಾಟದ ವಿಫಲತೆಯೇ ಇಂದಿನ ಸಮಾಜದ ಬಹುತೇಕ
ಸಮಸ್ಯೆಗಳ ಮೂಲ…..

ಅದು ರಾಜಕೀಯವಾಗಿರಲಿ, ಆಡಳಿತವಾಗಿರಲಿ, ಧಾರ್ಮಿಕವಾಗಿರಲಿ…..

ಸುಳ್ಳಿನ ಬುದ್ಧಿವಂತಿಕೆಯ ಪ್ರದರ್ಶನ ಹೆಚ್ಚಾಗಿ ಆಚರಣೆಗೆ ಬಂದು ಮನುಷ್ಯನ ಅಸ್ತಿತ್ವವೇ ಅನುಮಾನಕ್ಕೆ ಒಳಗಾಗಿದೆ…….

ಆತನ ವ್ಯಕ್ತಿತ್ವದ
ವಿಶ್ವಾಸಾರ್ಹತೆಯೇ ಪ್ರಶ್ನಾರ್ಥಕವಾಗಿದೆ…….

ಇಡೀ ಸಮಾಜ ವಾಸ್ತವಿಕ ಸತ್ಯ ಒಪ್ಪಿಕೊಂಡು ಮುಂದುವರೆದಲ್ಲಿ ,
ಖಂಡಿತವಾಗಿಯೂ ಈಗ ನಮ್ಮನ್ನು ಕಾಡುತ್ತಿರುವ ಬಹುತೇಕ ಸಮಸ್ಯೆಗಳು
ತನ್ನಿಂದ ತಾನೇ ಮಾಯವಾಗುತ್ತವೆ……

ಎಲ್ಲರೂ ಸತ್ಯ ಹರಿಶ್ಚಂದ್ರರಂತೆ ಆಗದಿದ್ದರೂ, ಕನಿಷ್ಠ
ಅನಾವಶ್ಯಕವಾದ ಮತ್ತು ಅಪಾಯಕಾರಿ ಸುಳ್ಳುಗಳಿಂದ ದೂರವಿದ್ದರೂ ಸಾಕು…..

ಅದೇ ನಮ್ಮ ವ್ಯಕ್ತಿತ್ವ ಉತ್ತಮಗೊಳ್ಳಲು ಮತ್ತು ಸಾಕಷ್ಟು ನೆಮ್ಮದಿಯ,
ಬದುಕಿಗೆ ಸಹಕಾರಿಯಾಗುತ್ತದೆ…..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……

ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

ಸಾರ್ವಕಾಲಿಕ ಸತ್ಯ,
ತಾತ್ಕಾಲಿಕ ಸತ್ಯ,
ಘಟನೆಯ ಸತ್ಯ,
ಸಾಂದರ್ಭಿಕ ಸತ್ಯ,
ಅರಿವಿನ ಸತ್ಯ,
ಊಹಾತ್ಮಕ ಸತ್ಯ, ವ್ಯಾವಹಾರಿಕ ಸತ್ಯ,
ಭಕ್ತಿ ಭಾವಗಳ ಸತ್ಯ,
ವೈಚಾರಿಕ ಸತ್ಯ,
ಈ ಕ್ಷಣದ ಸತ್ಯ,
ವಾಸ್ತವಿಕ ಸತ್ಯ……
ಹೀಗೆ ಸತ್ಯವೂ ಒಂದಷ್ಟು ರೂಪದಲ್ಲಿ ಸಿಗುತ್ತದೆ. ಸಮಗ್ರ ಚಿಂತನೆಯಿಂದ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದು……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

3 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

9 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

11 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago