Categories: ಲೇಖನ

ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ….

ಸತ್ಯ……..

ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ
ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….

ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ
ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….

ನಿಮ್ಮ ಬರಹಗಳಲ್ಲಿ ಅತ್ಯುತ್ತಮ ಪದ ಲಾಲಿತ್ಯ, ಭಾಷೆಯ ಸೊಗಡು, ಸಾಹಿತ್ಯ ನಲಿದಾಡುತ್ತಿದ್ದರೂ
ಸತ್ಯದ ಹುಡುಕಾಟ ನಿರಂತರವಾಗಿರಲಿ…..

ನಿಮ್ಮ ಪ್ರತಿಭೆ ಯಾವ ಪ್ರಕಾರದ ಕಲೆಯಲ್ಲಾದರೂ ಅರಳುತ್ತಿರಲಿ,
ಸತ್ಯದ ಹುಡುಕಾಟ ನಿರಂತರವಾಗಿರಲಿ…….

ನಿಮ್ಮ ಜ್ಞಾನದ ಮಟ್ಟ ತುಂಬಿ ಹರಿಯುತ್ತಿದ್ದರೂ
ಸತ್ಯದ ಹುಡುಕಾಟ ನಿರಂತರವಾಗಿರಲಿ‌…….

ಏಕೆಂದರೆ,
ಸತ್ಯ ಮಾತ್ರವೇ ಸೃಷ್ಟಿಯ, ಸಮಾಜದ ತಳಹದಿ,
ಸತ್ಯವೆಂಬುದೇ ಇದೆಲ್ಲದರ ಪ್ರತ್ಯಕ್ಷ, ಪರೋಕ್ಷ ಶಕ್ತಿ……,

ಸತ್ಯದ ಅಗ್ನಿ ಪರೀಕ್ಷೆಯಲ್ಲಿ ಇವು ಗೆದ್ದು ಬಂದಾಗ ಮಾತ್ರವೇ ಈ ಎಲ್ಲಾ ಸಾಧನೆಗಳಿಗೆ ಅರ್ಥ ಸಿಗುವುದು……

ನಿಮ್ಮ ಆತ್ಮಾವಲೋಕನದ ಮೂಲವೂ ಸತ್ಯವೇ ಆಗಿರಲಿ…..

ಸತ್ಯದ ಹುಡುಕಾಟದ ವಿಫಲತೆಯೇ ಇಂದಿನ ಸಮಾಜದ ಬಹುತೇಕ
ಸಮಸ್ಯೆಗಳ ಮೂಲ…..

ಅದು ರಾಜಕೀಯವಾಗಿರಲಿ, ಆಡಳಿತವಾಗಿರಲಿ, ಧಾರ್ಮಿಕವಾಗಿರಲಿ…..

ಸುಳ್ಳಿನ ಬುದ್ಧಿವಂತಿಕೆಯ ಪ್ರದರ್ಶನ ಹೆಚ್ಚಾಗಿ ಆಚರಣೆಗೆ ಬಂದು ಮನುಷ್ಯನ ಅಸ್ತಿತ್ವವೇ ಅನುಮಾನಕ್ಕೆ ಒಳಗಾಗಿದೆ…….

ಆತನ ವ್ಯಕ್ತಿತ್ವದ
ವಿಶ್ವಾಸಾರ್ಹತೆಯೇ ಪ್ರಶ್ನಾರ್ಥಕವಾಗಿದೆ…….

ಇಡೀ ಸಮಾಜ ವಾಸ್ತವಿಕ ಸತ್ಯ ಒಪ್ಪಿಕೊಂಡು ಮುಂದುವರೆದಲ್ಲಿ ,
ಖಂಡಿತವಾಗಿಯೂ ಈಗ ನಮ್ಮನ್ನು ಕಾಡುತ್ತಿರುವ ಬಹುತೇಕ ಸಮಸ್ಯೆಗಳು
ತನ್ನಿಂದ ತಾನೇ ಮಾಯವಾಗುತ್ತವೆ……

ಎಲ್ಲರೂ ಸತ್ಯ ಹರಿಶ್ಚಂದ್ರರಂತೆ ಆಗದಿದ್ದರೂ, ಕನಿಷ್ಠ
ಅನಾವಶ್ಯಕವಾದ ಮತ್ತು ಅಪಾಯಕಾರಿ ಸುಳ್ಳುಗಳಿಂದ ದೂರವಿದ್ದರೂ ಸಾಕು…..

ಅದೇ ನಮ್ಮ ವ್ಯಕ್ತಿತ್ವ ಉತ್ತಮಗೊಳ್ಳಲು ಮತ್ತು ಸಾಕಷ್ಟು ನೆಮ್ಮದಿಯ,
ಬದುಕಿಗೆ ಸಹಕಾರಿಯಾಗುತ್ತದೆ…..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……

ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

ಸಾರ್ವಕಾಲಿಕ ಸತ್ಯ,
ತಾತ್ಕಾಲಿಕ ಸತ್ಯ,
ಘಟನೆಯ ಸತ್ಯ,
ಸಾಂದರ್ಭಿಕ ಸತ್ಯ,
ಅರಿವಿನ ಸತ್ಯ,
ಊಹಾತ್ಮಕ ಸತ್ಯ, ವ್ಯಾವಹಾರಿಕ ಸತ್ಯ,
ಭಕ್ತಿ ಭಾವಗಳ ಸತ್ಯ,
ವೈಚಾರಿಕ ಸತ್ಯ,
ಈ ಕ್ಷಣದ ಸತ್ಯ,
ವಾಸ್ತವಿಕ ಸತ್ಯ……
ಹೀಗೆ ಸತ್ಯವೂ ಒಂದಷ್ಟು ರೂಪದಲ್ಲಿ ಸಿಗುತ್ತದೆ. ಸಮಗ್ರ ಚಿಂತನೆಯಿಂದ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದು……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

5 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

6 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

7 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

7 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

11 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

13 hours ago