Categories: ಲೇಖನ

ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ….

ಸತ್ಯ……..

ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ
ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….

ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ
ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….

ನಿಮ್ಮ ಬರಹಗಳಲ್ಲಿ ಅತ್ಯುತ್ತಮ ಪದ ಲಾಲಿತ್ಯ, ಭಾಷೆಯ ಸೊಗಡು, ಸಾಹಿತ್ಯ ನಲಿದಾಡುತ್ತಿದ್ದರೂ
ಸತ್ಯದ ಹುಡುಕಾಟ ನಿರಂತರವಾಗಿರಲಿ…..

ನಿಮ್ಮ ಪ್ರತಿಭೆ ಯಾವ ಪ್ರಕಾರದ ಕಲೆಯಲ್ಲಾದರೂ ಅರಳುತ್ತಿರಲಿ,
ಸತ್ಯದ ಹುಡುಕಾಟ ನಿರಂತರವಾಗಿರಲಿ…….

ನಿಮ್ಮ ಜ್ಞಾನದ ಮಟ್ಟ ತುಂಬಿ ಹರಿಯುತ್ತಿದ್ದರೂ
ಸತ್ಯದ ಹುಡುಕಾಟ ನಿರಂತರವಾಗಿರಲಿ‌…….

ಏಕೆಂದರೆ,
ಸತ್ಯ ಮಾತ್ರವೇ ಸೃಷ್ಟಿಯ, ಸಮಾಜದ ತಳಹದಿ,
ಸತ್ಯವೆಂಬುದೇ ಇದೆಲ್ಲದರ ಪ್ರತ್ಯಕ್ಷ, ಪರೋಕ್ಷ ಶಕ್ತಿ……,

ಸತ್ಯದ ಅಗ್ನಿ ಪರೀಕ್ಷೆಯಲ್ಲಿ ಇವು ಗೆದ್ದು ಬಂದಾಗ ಮಾತ್ರವೇ ಈ ಎಲ್ಲಾ ಸಾಧನೆಗಳಿಗೆ ಅರ್ಥ ಸಿಗುವುದು……

ನಿಮ್ಮ ಆತ್ಮಾವಲೋಕನದ ಮೂಲವೂ ಸತ್ಯವೇ ಆಗಿರಲಿ…..

ಸತ್ಯದ ಹುಡುಕಾಟದ ವಿಫಲತೆಯೇ ಇಂದಿನ ಸಮಾಜದ ಬಹುತೇಕ
ಸಮಸ್ಯೆಗಳ ಮೂಲ…..

ಅದು ರಾಜಕೀಯವಾಗಿರಲಿ, ಆಡಳಿತವಾಗಿರಲಿ, ಧಾರ್ಮಿಕವಾಗಿರಲಿ…..

ಸುಳ್ಳಿನ ಬುದ್ಧಿವಂತಿಕೆಯ ಪ್ರದರ್ಶನ ಹೆಚ್ಚಾಗಿ ಆಚರಣೆಗೆ ಬಂದು ಮನುಷ್ಯನ ಅಸ್ತಿತ್ವವೇ ಅನುಮಾನಕ್ಕೆ ಒಳಗಾಗಿದೆ…….

ಆತನ ವ್ಯಕ್ತಿತ್ವದ
ವಿಶ್ವಾಸಾರ್ಹತೆಯೇ ಪ್ರಶ್ನಾರ್ಥಕವಾಗಿದೆ…….

ಇಡೀ ಸಮಾಜ ವಾಸ್ತವಿಕ ಸತ್ಯ ಒಪ್ಪಿಕೊಂಡು ಮುಂದುವರೆದಲ್ಲಿ ,
ಖಂಡಿತವಾಗಿಯೂ ಈಗ ನಮ್ಮನ್ನು ಕಾಡುತ್ತಿರುವ ಬಹುತೇಕ ಸಮಸ್ಯೆಗಳು
ತನ್ನಿಂದ ತಾನೇ ಮಾಯವಾಗುತ್ತವೆ……

ಎಲ್ಲರೂ ಸತ್ಯ ಹರಿಶ್ಚಂದ್ರರಂತೆ ಆಗದಿದ್ದರೂ, ಕನಿಷ್ಠ
ಅನಾವಶ್ಯಕವಾದ ಮತ್ತು ಅಪಾಯಕಾರಿ ಸುಳ್ಳುಗಳಿಂದ ದೂರವಿದ್ದರೂ ಸಾಕು…..

ಅದೇ ನಮ್ಮ ವ್ಯಕ್ತಿತ್ವ ಉತ್ತಮಗೊಳ್ಳಲು ಮತ್ತು ಸಾಕಷ್ಟು ನೆಮ್ಮದಿಯ,
ಬದುಕಿಗೆ ಸಹಕಾರಿಯಾಗುತ್ತದೆ…..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……

ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

ಸಾರ್ವಕಾಲಿಕ ಸತ್ಯ,
ತಾತ್ಕಾಲಿಕ ಸತ್ಯ,
ಘಟನೆಯ ಸತ್ಯ,
ಸಾಂದರ್ಭಿಕ ಸತ್ಯ,
ಅರಿವಿನ ಸತ್ಯ,
ಊಹಾತ್ಮಕ ಸತ್ಯ, ವ್ಯಾವಹಾರಿಕ ಸತ್ಯ,
ಭಕ್ತಿ ಭಾವಗಳ ಸತ್ಯ,
ವೈಚಾರಿಕ ಸತ್ಯ,
ಈ ಕ್ಷಣದ ಸತ್ಯ,
ವಾಸ್ತವಿಕ ಸತ್ಯ……
ಹೀಗೆ ಸತ್ಯವೂ ಒಂದಷ್ಟು ರೂಪದಲ್ಲಿ ಸಿಗುತ್ತದೆ. ಸಮಗ್ರ ಚಿಂತನೆಯಿಂದ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದು……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

8 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

8 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

8 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

8 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

11 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

15 hours ago