ಸತ್ಯ……..
ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..
ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ
ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….
ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ
ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….
ನಿಮ್ಮ ಬರಹಗಳಲ್ಲಿ ಅತ್ಯುತ್ತಮ ಪದ ಲಾಲಿತ್ಯ, ಭಾಷೆಯ ಸೊಗಡು, ಸಾಹಿತ್ಯ ನಲಿದಾಡುತ್ತಿದ್ದರೂ
ಸತ್ಯದ ಹುಡುಕಾಟ ನಿರಂತರವಾಗಿರಲಿ…..
ನಿಮ್ಮ ಪ್ರತಿಭೆ ಯಾವ ಪ್ರಕಾರದ ಕಲೆಯಲ್ಲಾದರೂ ಅರಳುತ್ತಿರಲಿ,
ಸತ್ಯದ ಹುಡುಕಾಟ ನಿರಂತರವಾಗಿರಲಿ…….
ನಿಮ್ಮ ಜ್ಞಾನದ ಮಟ್ಟ ತುಂಬಿ ಹರಿಯುತ್ತಿದ್ದರೂ
ಸತ್ಯದ ಹುಡುಕಾಟ ನಿರಂತರವಾಗಿರಲಿ…….
ಏಕೆಂದರೆ,
ಸತ್ಯ ಮಾತ್ರವೇ ಸೃಷ್ಟಿಯ, ಸಮಾಜದ ತಳಹದಿ,
ಸತ್ಯವೆಂಬುದೇ ಇದೆಲ್ಲದರ ಪ್ರತ್ಯಕ್ಷ, ಪರೋಕ್ಷ ಶಕ್ತಿ……,
ಸತ್ಯದ ಅಗ್ನಿ ಪರೀಕ್ಷೆಯಲ್ಲಿ ಇವು ಗೆದ್ದು ಬಂದಾಗ ಮಾತ್ರವೇ ಈ ಎಲ್ಲಾ ಸಾಧನೆಗಳಿಗೆ ಅರ್ಥ ಸಿಗುವುದು……
ನಿಮ್ಮ ಆತ್ಮಾವಲೋಕನದ ಮೂಲವೂ ಸತ್ಯವೇ ಆಗಿರಲಿ…..
ಸತ್ಯದ ಹುಡುಕಾಟದ ವಿಫಲತೆಯೇ ಇಂದಿನ ಸಮಾಜದ ಬಹುತೇಕ
ಸಮಸ್ಯೆಗಳ ಮೂಲ…..
ಅದು ರಾಜಕೀಯವಾಗಿರಲಿ, ಆಡಳಿತವಾಗಿರಲಿ, ಧಾರ್ಮಿಕವಾಗಿರಲಿ…..
ಸುಳ್ಳಿನ ಬುದ್ಧಿವಂತಿಕೆಯ ಪ್ರದರ್ಶನ ಹೆಚ್ಚಾಗಿ ಆಚರಣೆಗೆ ಬಂದು ಮನುಷ್ಯನ ಅಸ್ತಿತ್ವವೇ ಅನುಮಾನಕ್ಕೆ ಒಳಗಾಗಿದೆ…….
ಆತನ ವ್ಯಕ್ತಿತ್ವದ
ವಿಶ್ವಾಸಾರ್ಹತೆಯೇ ಪ್ರಶ್ನಾರ್ಥಕವಾಗಿದೆ…….
ಇಡೀ ಸಮಾಜ ವಾಸ್ತವಿಕ ಸತ್ಯ ಒಪ್ಪಿಕೊಂಡು ಮುಂದುವರೆದಲ್ಲಿ ,
ಖಂಡಿತವಾಗಿಯೂ ಈಗ ನಮ್ಮನ್ನು ಕಾಡುತ್ತಿರುವ ಬಹುತೇಕ ಸಮಸ್ಯೆಗಳು
ತನ್ನಿಂದ ತಾನೇ ಮಾಯವಾಗುತ್ತವೆ……
ಎಲ್ಲರೂ ಸತ್ಯ ಹರಿಶ್ಚಂದ್ರರಂತೆ ಆಗದಿದ್ದರೂ, ಕನಿಷ್ಠ
ಅನಾವಶ್ಯಕವಾದ ಮತ್ತು ಅಪಾಯಕಾರಿ ಸುಳ್ಳುಗಳಿಂದ ದೂರವಿದ್ದರೂ ಸಾಕು…..
ಅದೇ ನಮ್ಮ ವ್ಯಕ್ತಿತ್ವ ಉತ್ತಮಗೊಳ್ಳಲು ಮತ್ತು ಸಾಕಷ್ಟು ನೆಮ್ಮದಿಯ,
ಬದುಕಿಗೆ ಸಹಕಾರಿಯಾಗುತ್ತದೆ…..
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……
ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಸಾರ್ವಕಾಲಿಕ ಸತ್ಯ,
ತಾತ್ಕಾಲಿಕ ಸತ್ಯ,
ಘಟನೆಯ ಸತ್ಯ,
ಸಾಂದರ್ಭಿಕ ಸತ್ಯ,
ಅರಿವಿನ ಸತ್ಯ,
ಊಹಾತ್ಮಕ ಸತ್ಯ, ವ್ಯಾವಹಾರಿಕ ಸತ್ಯ,
ಭಕ್ತಿ ಭಾವಗಳ ಸತ್ಯ,
ವೈಚಾರಿಕ ಸತ್ಯ,
ಈ ಕ್ಷಣದ ಸತ್ಯ,
ವಾಸ್ತವಿಕ ಸತ್ಯ……
ಹೀಗೆ ಸತ್ಯವೂ ಒಂದಷ್ಟು ರೂಪದಲ್ಲಿ ಸಿಗುತ್ತದೆ. ಸಮಗ್ರ ಚಿಂತನೆಯಿಂದ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದು……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್.ಕೆ
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…