ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅದೇಶ ಹೊರಡಿಸಿದ ಹಿನ್ನೆಲೆ ಮೋದಿ ಸರ್ಕಾರ ವಿರುದ್ಧ ತೀವ್ರ ಕಿಡಿಕಾರಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರವು ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ ಮಾಜಿ ಸಿಎಂ ಸಿದ್ದರಾಮಯ್ಯ.
ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವ ಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ.
ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್ ಡಿ ಎ ಸರ್ಕಾರದ ವಿರುದ್ಧ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.
ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ.
ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ.
ರಾಹುಲ್ ಗಾಂಧಿಯವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ಧಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…