Categories: ರಾಜ್ಯ

ಸತ್ಯವನ್ನು ಎದುರಿಸಲಾಗದ ಮೋದಿ ಸರ್ಕಾರ: ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಹೇಡಿತನ ಪ್ರದರ್ಶನ- ಸಿದ್ದರಾಮಯ್ಯ

ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅದೇಶ ಹೊರಡಿಸಿದ ಹಿನ್ನೆಲೆ ಮೋದಿ ಸರ್ಕಾರ ವಿರುದ್ಧ ತೀವ್ರ ಕಿಡಿಕಾರಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರವು ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ ಮಾಜಿ ಸಿಎಂ ಸಿದ್ದರಾಮಯ್ಯ.

ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವ ಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ.

ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್ ಡಿ ಎ ಸರ್ಕಾರದ ವಿರುದ್ಧ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.

ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ.
ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ.

ರಾಹುಲ್ ಗಾಂಧಿಯವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ಧಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

8 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

9 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

9 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

9 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

11 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

13 hours ago