ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅದೇಶ ಹೊರಡಿಸಿದ ಹಿನ್ನೆಲೆ ಮೋದಿ ಸರ್ಕಾರ ವಿರುದ್ಧ ತೀವ್ರ ಕಿಡಿಕಾರಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರವು ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ ಮಾಜಿ ಸಿಎಂ ಸಿದ್ದರಾಮಯ್ಯ.
ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವ ಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ.
ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್ ಡಿ ಎ ಸರ್ಕಾರದ ವಿರುದ್ಧ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.
ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ.
ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ.
ರಾಹುಲ್ ಗಾಂಧಿಯವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ಧಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…