‘ಸತ್ಯ, ಅಹಿಂಸೆಯ ಸಿದ್ಧಾಂತದಿಂದಲೇ ಜಗವನ್ನು ಗೆದ್ದ ಚೇತನ ಮಹಾತ್ಮ ಗಾಂಧಿ’- ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ

ಮಹಾತ್ಮ ಗಾಂಧೀಜಿ ಅವರು ಭಾರತೀಯರ ಮನಸ್ಸಿನಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಜನರ ಮನಸೆಳೆಯದವರು.  ವಿಶ್ವಸಂಸ್ಥೆ ಮಹಾತ್ಮ‌ ಗಾಂಧೀಜಿ ಜನ್ಮದಿನವನ್ನು ವಿಶ್ವ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಮಹಾತ್ಮಗಾಂಧಿ ಪ್ರತಿಮೆಯ‌    ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹಾತ್ಮಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ  ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಹಾತ್ಮಗಾಂಧೀಜಿ ಅವರ ಸತ್ಯಾಗ್ರಹ ಮತ್ತು ಅಹಿಂಸಾತ್ಮಕ ಪ್ರತಿರೋಧ ಭಾರತ ಸ್ವಾತಂತ್ರ್ಯ ಚಳುವಳಿಗೆ ಮಾತ್ರ ಸೀಮಿತವಾಗಲಿಲ್ಲ. ವಿಶ್ವದ ಹಲವು ‌ದೇಶದ ನಾಗರಿಕರಿಗೆ ಮಾನವ ಹಕ್ಕುಗಳು ಮತ್ತು ವಿಮೋಚನಾ ಚಳವಳಿಗಳ ಮೇಲೆ ಅಳವಾದ ಪ್ರಭಾವ ಬೀರಿತು.‌ ಮಹಾತ್ಮ ಗಾಂಧೀಜಿಯವರು ಮಾನವಹಕ್ಕು, ಸಾಮಾಜಿಕ ಮತ್ತು ಆರ್ಥಿಕ ನ್ಯಾಯಕ್ಕಾಗಿ ನಡೆಸಿದ ಹೋರಾಟಗಳು ಜಾಗತಿಕ ಮನ್ನಣೆಯನ್ನು ಪಡೆದವು.‌ ಬ್ರಿಟಿಷರ ನಿಯಂತ್ರಣದಿಂದ ಭಾರತವನ್ನು ವಿಮೋಚನೆಗೊಳಿಸಿದ ಹೋರಾಟವನ್ನು ಭಾರತೀಯರು ಎಂದೂ ಮರೆಯಲಾರರು. ಮಹಾತ್ಮಗಾಂಧೀಜಿ ತನ್ನ ಸತ್ಯ, ಅಹಿಂಸೆಯ ಸಿದ್ಧಾಂತದಿಂದಲೇ ಜಗವನ್ನು ಗೆದ್ದ ಚೇತನ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪ್ರಾಮಾಣಿಕತೆ, ಮತ್ತು ವಿನಮ್ರತೆ, ಸಹಿಷ್ಣುತೆ ಮತ್ತು ದೃಢನಿಶ್ಚಯವುಳ್ಳ ವ್ಯಕ್ತಿತ್ವ ಹೊಂದಿದ್ದವರು. ಭಾರತವನ್ನು ಪ್ರಗತಿಯೆಡೆಗೆ  ಮುನ್ನಡೆಸಿದವರು. ಮಹಾತ್ಮಾ ಗಾಂಧಿ ಅವರ ರಾಜಕೀಯ ಚಿಂತನೆಗಳಿಂದ ಅತ್ಯಂತ ಪ್ರಭಾವಿತರಾಗಿದ್ದರು. ಜೈ ಜವಾನ್ ಮತ್ತು ಜೈ ಕಿಸಾನ್ ಘೋಷ ವಾಕ್ಯದ ಮೂಲಕ ದೇಶದ ಅಭಿವೃದ್ಧಿಯ ಹರಿಕಾರ ಎನಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿಯವರು ತಮ್ಮ ಬಾಲ್ಯದಲ್ಲಿಯೇ ಧೈರ್ಯ, ಸಾಹಸ ಪ್ರೇಮ, ತಾಳ್ಮೆ, ಸ್ವಯಂ ನಿಯಂತ್ರಣ, ಸೌಜನ್ಯ ಮತ್ತು ನಿಸ್ವಾರ್ಥತೆಯಂತಹ ಗುಣಗಳನ್ನು ಬೆಳೆಸಿಕೊಂಡರು ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಎಂ.ಮಲ್ಲೇಶ್, ಸ್ಥಾಯಿ ಸಮಿತಿ ಅಧ್ಯಕ್ಷ  ವಿ.ಎಸ್.ರವಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಮಾಜಿ‌ ಖಜಾಂಚಿ  ನಂ.ಮಹಾದೇವ್, ದೊಡ್ಡಬಳ್ಳಾಪುರ ತಾಲ್ಲೂಕು ‌ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು,  ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಗೌರವ ಕಾರ್ಯದರ್ಶಿ ಎ.ಜಯರಾಮ, ಕೋಶಾಧ್ಯಕ್ಷ  ಸಾ.ಲ.ಕಮಲನಾಥ್, ಕಸಬಾ ಘಟಕದ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ರಾಜು ಸಣ್ಣಕ್ಕಿ, ಮುನಿರಾಜು, ನಾಗರತ್ನಮ್ಮ, ಸಫೀರ್,  ಮಲ್ಲೇಶ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ‌ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ ನಾಗರಾಜು, ಆರ್ಯವೈಶ್ಯ ಮಂಡಲಿಯ ಪದಾಧಿಕಾರಿಗಳು ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

4 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

8 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

18 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

22 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago