ಸತ್ಯ ತಿರುಚಿ ಸುದ್ದಿ ಮಾಡುವುದನ್ನು ಬಿಡಿ- ನನ್ನ ಸರ್ಕಾರದಲ್ಲಿ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ-ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ- ಸಿಎಂ ಸಿದ್ದರಾಮಯ್ಯ

ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡ್ತಾರೆ. ಇದು ತಪ್ಪು. ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ. ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ? ಇಲ್ಲವೋ? ಎನ್ನುವುದನ್ನೂ ಪ್ರಾಮಾಣಿಕಕವಾಗಿ ಜನರಿಗೆ ತಲುಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ, ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿಕೊಳ್ಳಬೇಕು ಎಂದರು.

ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂಥಾ ಮೌಡ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್ ಗಳು ಮಾಡಬಾರದು ಎಂದು ಹೇಳಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ನಿರ್ಮಲಾನಂದ ಮಹಾ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಸಚಿವರಾದ ಚಲಯವರಾಯಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು,  ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

10 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

21 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

22 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

22 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago