ಸತ್ಯ ತಿರುಚಿ ಸುದ್ದಿ ಮಾಡುವುದನ್ನು ಬಿಡಿ- ನನ್ನ ಸರ್ಕಾರದಲ್ಲಿ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ-ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ- ಸಿಎಂ ಸಿದ್ದರಾಮಯ್ಯ

ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡ್ತಾರೆ. ಇದು ತಪ್ಪು. ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ. ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ? ಇಲ್ಲವೋ? ಎನ್ನುವುದನ್ನೂ ಪ್ರಾಮಾಣಿಕಕವಾಗಿ ಜನರಿಗೆ ತಲುಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ, ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿಕೊಳ್ಳಬೇಕು ಎಂದರು.

ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂಥಾ ಮೌಡ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್ ಗಳು ಮಾಡಬಾರದು ಎಂದು ಹೇಳಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ನಿರ್ಮಲಾನಂದ ಮಹಾ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಸಚಿವರಾದ ಚಲಯವರಾಯಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು,  ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

5 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

18 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

21 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

22 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago