ಸತ್ಯ ತಿರುಚಿ ಸುದ್ದಿ ಮಾಡುವುದನ್ನು ಬಿಡಿ- ನನ್ನ ಸರ್ಕಾರದಲ್ಲಿ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ-ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ- ಸಿಎಂ ಸಿದ್ದರಾಮಯ್ಯ

ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡ್ತಾರೆ. ಇದು ತಪ್ಪು. ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ. ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ? ಇಲ್ಲವೋ? ಎನ್ನುವುದನ್ನೂ ಪ್ರಾಮಾಣಿಕಕವಾಗಿ ಜನರಿಗೆ ತಲುಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ, ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿಕೊಳ್ಳಬೇಕು ಎಂದರು.

ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂಥಾ ಮೌಡ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್ ಗಳು ಮಾಡಬಾರದು ಎಂದು ಹೇಳಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ನಿರ್ಮಲಾನಂದ ಮಹಾ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಸಚಿವರಾದ ಚಲಯವರಾಯಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು,  ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

2 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

3 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

3 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

4 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

7 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

7 hours ago