ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡ್ತಾರೆ. ಇದು ತಪ್ಪು. ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ. ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ? ಇಲ್ಲವೋ? ಎನ್ನುವುದನ್ನೂ ಪ್ರಾಮಾಣಿಕಕವಾಗಿ ಜನರಿಗೆ ತಲುಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ, ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿಕೊಳ್ಳಬೇಕು ಎಂದರು.
ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂಥಾ ಮೌಡ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್ ಗಳು ಮಾಡಬಾರದು ಎಂದು ಹೇಳಿದರು.
ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ನಿರ್ಮಲಾನಂದ ಮಹಾ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಸಚಿವರಾದ ಚಲಯವರಾಯಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…