ಸತ್ಯ ತಿರುಚಿ ಸುದ್ದಿ ಮಾಡುವುದನ್ನು ಬಿಡಿ- ನನ್ನ ಸರ್ಕಾರದಲ್ಲಿ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ-ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ- ಸಿಎಂ ಸಿದ್ದರಾಮಯ್ಯ

ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡ್ತಾರೆ. ಇದು ತಪ್ಪು. ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ. ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ? ಇಲ್ಲವೋ? ಎನ್ನುವುದನ್ನೂ ಪ್ರಾಮಾಣಿಕಕವಾಗಿ ಜನರಿಗೆ ತಲುಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ, ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿಕೊಳ್ಳಬೇಕು ಎಂದರು.

ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂಥಾ ಮೌಡ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್ ಗಳು ಮಾಡಬಾರದು ಎಂದು ಹೇಳಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ನಿರ್ಮಲಾನಂದ ಮಹಾ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಸಚಿವರಾದ ಚಲಯವರಾಯಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು,  ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

30 minutes ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

5 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

7 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

10 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago