Categories: ಕೋಲಾರ

ಸದನದಲ್ಲಿ ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬೆಂಬಲಿಸಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸದನದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಪ್ರಶ್ನೆ ಮಾಡಲು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಅವರಿಗೆ ಶಿಕ್ಷಕರು ಪ್ರಥಮ ಪ್ರಾಶಸ್ತದ ಮತ ನೀಡಿ ಗೆಲ್ಲಿಸುವಂತೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಮನವಿ ಮಾಡಿದರು.

ಅಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸೋಮವಾರ ನಗರದಲ್ಲಿ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚನೆಯಲ್ಲಿ ಮಾತನಾಡಿದ ಅವರು, ಸುಮಾರು 18 ವರ್ಷಗಳಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿ ಸರಕಾರದಲ್ಲಿ ಪ್ರಭಾವಿಯಾಗಿದ್ದರೂ, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆದ್ದಾಗ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತದೆ. ಕಾಂಗ್ರೆಸ್ ಅಭ್ಯರ್ಥಿ ಸ್ವತಃ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು ಶೈಕ್ಷಣಿಕ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವು ಇದ್ದು, ಆಯ್ಕೆಯಾದರೆ ನಮ್ಮೊಂದಿಗೆ ಜೊತೆಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆಯಾದರೆ ಶಿಕ್ಷಕರ ನಿರೀಕ್ಷೆ ಹುಸಿಯಾಗದಂತೆ ರಾಜ್ಯದಲ್ಲಿ ನಿಮ್ಮಗಳ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳಾಗಿವೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಪಠ್ಯಕ್ರಮದಲ್ಲಿ ಅನೇಕ ಬದಲಾವಣೆಯನ್ನು ತರಲಾಗಿದೆ. ವಿದ್ಯಾಸಿರಿ ಯೋಜನೆ ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ. 5 ಗ್ಯಾರಂಟಿ ಯೋಜನೆಗಳನ್ನು ಎಲ್ಲ ಜನರಿಗೂ ತಲುಪಿಸಲು ಕ್ರಮವಹಿಸಲಾಗಿದೆ. ಮಹಿಳಾ ಶಿಕ್ಷಕಿಯರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಪುಟ್ಟಣ್ಣ ಮಾತನಾಡಿ, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಿದೆ. ಡಿ.ಟಿ ಶ್ರೀನಿವಾಸ್ ಅವರು ವಿಧಾನ ಪರಿಷತ್‌ ಸದಸ್ಯರಾಗಿ ಈ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ನಡೆಸಲು ಯೋಜನೆಗಳನ್ನು ರೂಪಿಸಲಾಗಿದೆ. ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸಿ ಕಾರ್ಯನಿರ್ವಹಿಸುತ್ತಾರೆ ಹಾಗಾಗಿ ಅವರನ್ನು ಎಂಎಲ್ಸಿ ಯಾಗಿ ಆಯ್ಕೆ ಮಾಡಿ ನಿಮ್ಮ ಸೇವೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿ, ಅತಿಥಿ ಶಿಕ್ಷಕರ ಸಮಸ್ಯೆಗಳ ನಿವಾರಣೆ, 7ನೇ ವೇತನ ಆಯೋಗ ಜಾರಿಗೊಳಿಸಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಮತ್ತು ಜೆಡಿಎಸ್‌ ಸರ್ಕಾರಗಳು ಶಿಕ್ಷಕರ ಸಮಸ್ಯೆಗಳನ್ನು ಬಗೆ ಹರಿಸಲು ಸಂಪೂರ್ಣ ನಿರ್ಲಕ್ಷ್ಯ ವಹಿಸಿವೆ. ಬಿಜೆಪಿ ಹಾಗೂ ಜೆಡಿಎಸ್‌ನಿಂದ ಶಿಕ್ಷಕರಿಗೆ ಯಾವುದೇ ಪ್ರಯೋಜನವಿಲ್ಲ ಈ ಕ್ಷೇತ್ರದಿಂದ ಆಯ್ಕೆಯಾದವರು ಯಾಕೆ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ ಅವರು ಈ ಚುನಾವಣೆಯಲ್ಲಿ ನಿಮ್ಮ ಮುಂದೆ ಮತ ಕೇಳುವ ನೈತಿಕತೆ ಉಳಿಸಿಕೊಂಡಿಲ್ಲ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಐದು ಜಿಲ್ಲೆಗಳ 33 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಈ ಅಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಸುಮಾರು 24 ಸಾವಿರದಷ್ಟು ಶಿಕ್ಷಕರು ಇದ್ದು ಸರಕಾರ ಇದ್ದ ಪಕ್ಷಕ್ಕೆ ಬೆಂಬಲಿಸಿದರೆ ನಿಮ್ಮ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತದೆ ಸರ್ಕಾರಿ ನೌಕರರ ಹಳೇ ಪಿಂಚಣಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಈಗಾಗಲೇ ಹಳೆ ಪಿಂಚಣಿ ಯೋಜನೆ ಜಾರಿಯಲ್ಲಿರುವ ರಾಜ್ಯಗಳಿಗೆ ತೆರಳಿ ಅಧ್ಯಯನ ಮಾಡಿ ವರದಿ ಕೊಡಲು ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಅಲ್ಲದೇ 7ನೇ ವೇತನ ಜಾರಿಗೂ ಮುಂದಾಗಿದೆ ಐದು ಜಿಲ್ಲೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರಿದ್ದು ಶಿಕ್ಷಕರ ಹಿತ ಕಾಯುವ ಕೆಲಸ ಮಾಡಿದ್ದಾರೆ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದರು.

ಈ ಸಂದರ್ಭದಲ್ಲಿ ಸಹ್ಯಾದ್ರಿ ಕಾಲೇಜಿನ ಉದಯಕುಮಾರ್, ಎಸ್.ಡಿ.ಸಿ ಕಾಲೇಜಿನ ಉಷಾ ಗಂಗಾಧರ್, ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಎಕ್ಸ್ ಲೆಂಟ್ ರಂಗಪ್ಪ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ನಗರಸಭೆ ಮಾಜಿ ಅಧ್ಯಕ್ಷ ಪ್ರಕಾಶ್, ಹಾಲಿ ಸದಸ್ಯ ಅಂಬರೀಶ್, ಕೋಚಿಮುಲ್ ನಿರ್ದೇಶಕ ಯೂಸುಫ್ ಷರೀಫ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ ಶಿವಕುಮಾರ್, ಜನಪನಹಳ್ಳಿ ನವೀನ್ ಕುಮಾರ್, ಪರ್ಜೇನಹಳ್ಳಿ ನಾಗೇಶ್ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ಶಿಕ್ಷಕರು ಇದ್ದರು

Ramesh Babu

Journalist

Recent Posts

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

4 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

17 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

18 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

18 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

18 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

20 hours ago