ಕೋಲ್ಕತ್ತ : ಹನ್ನೆರಡು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ ಐಪಿಎಲ್ ಸೀಸನ್ ನ ಮೊದಲ ಶತಕ ಬಾರಿಸಿದ ಹೈದರಾಬಾದ್ ಸನ್ ರೈಸರ್ಸ್ ತಂಡದ ಹ್ಯಾರಿ ಬ್ರೂಕ್ ತಮ್ಮ ಭರ್ಜರಿ ಬ್ಯಾಟಿಂಗ್ ಮೂಲಕ ತಂಡಕ್ಕೆ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲುವು ತಂದು ಕೊಟ್ಟರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಆರಂಭಿಕ ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ತ್ರಿಪಾಠಿ (9) ಬೇಗನೆ ಪೆವಿಲಿಯನ್ ಸೇರಿದರು.
ಆರಂಭಿಕ ಆಟಗಾರನಾಗಿ ಬಂದಿದ್ದ ಹ್ಯಾರಿ ಬ್ರೂಕ್ (100) ಶತಕ ಬಾರಿಸುವ ಮೂಲಕ ತಂಡದ ಮೊತ್ತವನ್ನು 228 ರನ್ ಗಳಿಸಲು ನೆರವಾದರು, ನಾಯಕ ಮಾಕ್ರಮ್ (50), ಅಭಿಷೇಕ್ ಶರ್ಮಾ (32) ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು.
ನಾಯಕ ನಿತೀಶ್ ರಾಣ ಐದು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸುವ ಮೂಲಕ (75) ರನ್ ಹಾಗೂ ಕಳೆದ ಪಂದ್ಯದ ಹೀರೋ ರಿಂಕೂ ಸಿಂಗ್ ನಾಲ್ಕು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಸಿಡಿಸುವ ಮೂಲಕ (58) ರನ್ ಗಳಿಸಿ ಗೆಲುವಿನ ಸನಿಹ ಬಂದರೂ ಸಹ ಗೆಲ್ಲಲು ಸಾಧ್ಯವಾಗಲಿಲ್ಲ, ಹೈದರಾಬಾದ್ ಸನ್ ರೈಸರ್ಸ್ 23 ರನ್ ಗೆಲುವು ಸಾಧಿಸಿದರು.
ಸನ್ ರೈಸರ್ಸ್ ತಂಡದ ಪರವಾಗಿ ಜಾನಿಸ್ ಹಾಗೂ ಮಾಕ೯ಂಡೇಯಾ ತಲಾ ಎರಡು ವಿಕೆಟ್ ಪಡೆದರೆ ಭುವನೇಶ್ವರ್ ಕುಮಾರ್, ನಟರಾಜನ್ ಹಾಗೂ ಉಮ್ರಾನ್ ಮಲ್ಲಿಕ್ ತಲಾ ಒಂದು ವಿಕೆಟ್ ಪಡೆದುಕೊಂಡರು, ಬ್ಯಾಟಿಂಗ್ ನಲ್ಲಿ ಮಿಂಚಿದ್ದ ಹ್ಯಾರಿ ಬ್ರೂಕ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…