Categories: ಐಪಿಎಲ್

ಸನ್ ಶೈನ್! ಹ್ಯಾರಿ ಬ್ರೂಕ್ ಶತಕದ ಸೊಬಗು

ಕೋಲ್ಕತ್ತ : ಹನ್ನೆರಡು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ ಐಪಿಎಲ್ ಸೀಸನ್ ನ ಮೊದಲ ಶತಕ ಬಾರಿಸಿದ ಹೈದರಾಬಾದ್ ಸನ್ ರೈಸರ್ಸ್ ತಂಡದ ಹ್ಯಾರಿ ಬ್ರೂಕ್ ತಮ್ಮ ಭರ್ಜರಿ ಬ್ಯಾಟಿಂಗ್ ಮೂಲಕ ತಂಡಕ್ಕೆ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲುವು ತಂದು ಕೊಟ್ಟರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ತ್ರಿಪಾಠಿ (9) ಬೇಗನೆ ಪೆವಿಲಿಯನ್ ಸೇರಿದರು.

ಆರಂಭಿಕ ಆಟಗಾರನಾಗಿ ಬಂದಿದ್ದ ಹ್ಯಾರಿ ಬ್ರೂಕ್ (100) ಶತಕ ಬಾರಿಸುವ ಮೂಲಕ ತಂಡದ ಮೊತ್ತವನ್ನು 228 ರನ್ ಗಳಿಸಲು ನೆರವಾದರು, ನಾಯಕ ಮಾಕ್ರಮ್ (50), ಅಭಿಷೇಕ್ ಶರ್ಮಾ (32) ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು.

ಬೃಹತ್ ಮೊತ್ತ ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ಆರಂಭಿಕ ಆಘಾತ ಅನುಭವಿಸಿತು, ಭರವಸೆಯ ಆಟಗಾರ ಗುಬಾ೯ಜ್ (0) ಭುವನೇಶ್ವರ್ ಅವರಿಗೆ ವಿಕೆಟ್ ಒಪ್ಪಿಸಿದರು, ಎನ್ ಜಗದೀಶನ್ (36) ರನ್ ಗಳಿಸಿದರೆ ವೆಂಕಟೇಶ್ ಅಯ್ಯರ್ (10), ಸುನೀಲ್ ನರೇನಾ (0), ಪೆವಿಲಿಯನ್ ಸೇರಿದರು.

ನಾಯಕ ನಿತೀಶ್ ರಾಣ ಐದು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸುವ ಮೂಲಕ (75) ರನ್ ಹಾಗೂ ಕಳೆದ ಪಂದ್ಯದ ಹೀರೋ ರಿಂಕೂ ಸಿಂಗ್ ನಾಲ್ಕು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಸಿಡಿಸುವ ಮೂಲಕ (58) ರನ್ ಗಳಿಸಿ ಗೆಲುವಿನ ಸನಿಹ ಬಂದರೂ ಸಹ ಗೆಲ್ಲಲು ಸಾಧ್ಯವಾಗಲಿಲ್ಲ, ಹೈದರಾಬಾದ್ ಸನ್ ರೈಸರ್ಸ್ 23 ರನ್ ಗೆಲುವು ಸಾಧಿಸಿದರು.

ಸನ್ ರೈಸರ್ಸ್ ತಂಡದ ಪರವಾಗಿ ಜಾನಿಸ್ ಹಾಗೂ ಮಾಕ೯ಂಡೇಯಾ ತಲಾ ಎರಡು ವಿಕೆಟ್ ಪಡೆದರೆ ಭುವನೇಶ್ವರ್ ಕುಮಾರ್, ನಟರಾಜನ್ ಹಾಗೂ ಉಮ್ರಾನ್ ಮಲ್ಲಿಕ್ ತಲಾ ಒಂದು ವಿಕೆಟ್ ಪಡೆದುಕೊಂಡರು, ಬ್ಯಾಟಿಂಗ್ ನಲ್ಲಿ ಮಿಂಚಿದ್ದ ಹ್ಯಾರಿ ಬ್ರೂಕ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

3 minutes ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

3 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

10 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

20 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

1 day ago