ಕೋಲ್ಕತ್ತ : ಹನ್ನೆರಡು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ ಐಪಿಎಲ್ ಸೀಸನ್ ನ ಮೊದಲ ಶತಕ ಬಾರಿಸಿದ ಹೈದರಾಬಾದ್ ಸನ್ ರೈಸರ್ಸ್ ತಂಡದ ಹ್ಯಾರಿ ಬ್ರೂಕ್ ತಮ್ಮ ಭರ್ಜರಿ ಬ್ಯಾಟಿಂಗ್ ಮೂಲಕ ತಂಡಕ್ಕೆ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲುವು ತಂದು ಕೊಟ್ಟರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಆರಂಭಿಕ ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ತ್ರಿಪಾಠಿ (9) ಬೇಗನೆ ಪೆವಿಲಿಯನ್ ಸೇರಿದರು.
ಆರಂಭಿಕ ಆಟಗಾರನಾಗಿ ಬಂದಿದ್ದ ಹ್ಯಾರಿ ಬ್ರೂಕ್ (100) ಶತಕ ಬಾರಿಸುವ ಮೂಲಕ ತಂಡದ ಮೊತ್ತವನ್ನು 228 ರನ್ ಗಳಿಸಲು ನೆರವಾದರು, ನಾಯಕ ಮಾಕ್ರಮ್ (50), ಅಭಿಷೇಕ್ ಶರ್ಮಾ (32) ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು.
ನಾಯಕ ನಿತೀಶ್ ರಾಣ ಐದು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸುವ ಮೂಲಕ (75) ರನ್ ಹಾಗೂ ಕಳೆದ ಪಂದ್ಯದ ಹೀರೋ ರಿಂಕೂ ಸಿಂಗ್ ನಾಲ್ಕು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಸಿಡಿಸುವ ಮೂಲಕ (58) ರನ್ ಗಳಿಸಿ ಗೆಲುವಿನ ಸನಿಹ ಬಂದರೂ ಸಹ ಗೆಲ್ಲಲು ಸಾಧ್ಯವಾಗಲಿಲ್ಲ, ಹೈದರಾಬಾದ್ ಸನ್ ರೈಸರ್ಸ್ 23 ರನ್ ಗೆಲುವು ಸಾಧಿಸಿದರು.
ಸನ್ ರೈಸರ್ಸ್ ತಂಡದ ಪರವಾಗಿ ಜಾನಿಸ್ ಹಾಗೂ ಮಾಕ೯ಂಡೇಯಾ ತಲಾ ಎರಡು ವಿಕೆಟ್ ಪಡೆದರೆ ಭುವನೇಶ್ವರ್ ಕುಮಾರ್, ನಟರಾಜನ್ ಹಾಗೂ ಉಮ್ರಾನ್ ಮಲ್ಲಿಕ್ ತಲಾ ಒಂದು ವಿಕೆಟ್ ಪಡೆದುಕೊಂಡರು, ಬ್ಯಾಟಿಂಗ್ ನಲ್ಲಿ ಮಿಂಚಿದ್ದ ಹ್ಯಾರಿ ಬ್ರೂಕ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…