ಕೋಲ್ಕತ್ತ : ಹನ್ನೆರಡು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ ಐಪಿಎಲ್ ಸೀಸನ್ ನ ಮೊದಲ ಶತಕ ಬಾರಿಸಿದ ಹೈದರಾಬಾದ್ ಸನ್ ರೈಸರ್ಸ್ ತಂಡದ ಹ್ಯಾರಿ ಬ್ರೂಕ್ ತಮ್ಮ ಭರ್ಜರಿ ಬ್ಯಾಟಿಂಗ್ ಮೂಲಕ ತಂಡಕ್ಕೆ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲುವು ತಂದು ಕೊಟ್ಟರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಆರಂಭಿಕ ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ತ್ರಿಪಾಠಿ (9) ಬೇಗನೆ ಪೆವಿಲಿಯನ್ ಸೇರಿದರು.
ಆರಂಭಿಕ ಆಟಗಾರನಾಗಿ ಬಂದಿದ್ದ ಹ್ಯಾರಿ ಬ್ರೂಕ್ (100) ಶತಕ ಬಾರಿಸುವ ಮೂಲಕ ತಂಡದ ಮೊತ್ತವನ್ನು 228 ರನ್ ಗಳಿಸಲು ನೆರವಾದರು, ನಾಯಕ ಮಾಕ್ರಮ್ (50), ಅಭಿಷೇಕ್ ಶರ್ಮಾ (32) ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು.
ನಾಯಕ ನಿತೀಶ್ ರಾಣ ಐದು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸುವ ಮೂಲಕ (75) ರನ್ ಹಾಗೂ ಕಳೆದ ಪಂದ್ಯದ ಹೀರೋ ರಿಂಕೂ ಸಿಂಗ್ ನಾಲ್ಕು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಸಿಡಿಸುವ ಮೂಲಕ (58) ರನ್ ಗಳಿಸಿ ಗೆಲುವಿನ ಸನಿಹ ಬಂದರೂ ಸಹ ಗೆಲ್ಲಲು ಸಾಧ್ಯವಾಗಲಿಲ್ಲ, ಹೈದರಾಬಾದ್ ಸನ್ ರೈಸರ್ಸ್ 23 ರನ್ ಗೆಲುವು ಸಾಧಿಸಿದರು.
ಸನ್ ರೈಸರ್ಸ್ ತಂಡದ ಪರವಾಗಿ ಜಾನಿಸ್ ಹಾಗೂ ಮಾಕ೯ಂಡೇಯಾ ತಲಾ ಎರಡು ವಿಕೆಟ್ ಪಡೆದರೆ ಭುವನೇಶ್ವರ್ ಕುಮಾರ್, ನಟರಾಜನ್ ಹಾಗೂ ಉಮ್ರಾನ್ ಮಲ್ಲಿಕ್ ತಲಾ ಒಂದು ವಿಕೆಟ್ ಪಡೆದುಕೊಂಡರು, ಬ್ಯಾಟಿಂಗ್ ನಲ್ಲಿ ಮಿಂಚಿದ್ದ ಹ್ಯಾರಿ ಬ್ರೂಕ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…
ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ..…
ಮೈಸೂರಿನ ತಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.…
ದೊಡ್ಡಬಳ್ಳಾಪುರ ನಗರದಲ್ಲಿ ಇಂದು (ಜೂ.22) 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್…