Categories: ರಾಜ್ಯ

ಸಪ್ತಪದಿಗೆ ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ ಮಾಡಿದ ಸರ್ಕಾರ

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲೆಂದು ವಧು-ವರರ ಸರಳ ಸಾಮೂಹಿಕ ವಿವಾಹಕ್ಕಾಗಿ ‘ಸಪ್ತಪದಿ’ ಯೋಜನೆ ಜಾರಿಗೆ ತರಲಾಗಿದೆ. ಪ್ರಸ್ತುತ ಈ ಸಪ್ತಪದಿ ವಿವಾಹ ಯೋಜನೆಗೆ ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ ಮಾಡಲಾಗಿದೆ.

‘ಮಾಂಗಲ್ಯ ಭಾಗ್ಯ’ ಯೋಜನೆಯ ಉದ್ದೇಶವು ಮದುವೆಗೆ ದುಂದು ವೆಚ್ಚ ಮಾಡುವ ಮೂಲಕ ಬಡ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸುವುದಾಗಿದೆ. ಈ ಯೋಜನೆಯನ್ನು ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ವಿಸ್ತರಿಸಲಾಗಿದೆ.

ಸಪ್ತಪದಿ ಯೋಜನೆಯಡಿಯ ಮಾರ್ಗಸೂಚಿಗಳನ್ನೇ ‘ಮಾಂಗಲ್ಯ ಭಾಗ್ಯ’ದಲ್ಲಿ ಅಳವಡಿಸಲಾಗಿದೆ. ವರನಿಗೆ ಅಂಗಿ-ಧೋತಿ, 5 ಸಾವಿರ ರೂ. ನಗದು ಹಾಗೂ ವಧುವಿಗೆ ಮಂಗಳಸೂತ್ರಕ್ಕಾಗಿ ಸೀರೆ, 1 ಸಾವಿರ ರೂ. ನಗದು, 8 ಗ್ರಾಂ. ಚಿನ್ನದ ತಾಳಿ-ಗುಂಡುಗಳನ್ನ ನೀಡಲಾಗುತ್ತದೆ.

ದೇವಾಲಯ ಆಡಳಿತ ಮಂಡಳಿಗಳು ಮದುವೆಗೆ ಬರುವ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ನೋಡಿಕೊಳ್ಳಲಿವೆ. ಯೋಜನೆಯಡಿಯಲ್ಲಿ ಸಾಮೂಹಿಕ ವಿವಾಹಕ್ಕೆ ಬೇಕಾಗುವ ವೆಚ್ಚವನ್ನು ದೇವಸ್ಥಾನದ ನಿಧಿಯಿಂದ ಭರಿಸಲಾಗುತ್ತದೆ. ದೇವಸ್ಥಾನದಿಂದ ಸಾಧ್ಯವಾಗದಿದ್ದಾಗ ಮಾತ್ರ ವಧು-ವರರಿಗೆ ನೀಡುವ ಆರ್ಥಿಕ ಸಹಾಯ ಧನವನ್ನು ಇಲಾಖೆಯ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲಾಗುವುದು.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

8 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

10 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

12 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

17 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

20 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago