ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲೆಂದು ವಧು-ವರರ ಸರಳ ಸಾಮೂಹಿಕ ವಿವಾಹಕ್ಕಾಗಿ ‘ಸಪ್ತಪದಿ’ ಯೋಜನೆ ಜಾರಿಗೆ ತರಲಾಗಿದೆ. ಪ್ರಸ್ತುತ ಈ ಸಪ್ತಪದಿ ವಿವಾಹ ಯೋಜನೆಗೆ ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ ಮಾಡಲಾಗಿದೆ.
‘ಮಾಂಗಲ್ಯ ಭಾಗ್ಯ’ ಯೋಜನೆಯ ಉದ್ದೇಶವು ಮದುವೆಗೆ ದುಂದು ವೆಚ್ಚ ಮಾಡುವ ಮೂಲಕ ಬಡ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸುವುದಾಗಿದೆ. ಈ ಯೋಜನೆಯನ್ನು ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ವಿಸ್ತರಿಸಲಾಗಿದೆ.
ಸಪ್ತಪದಿ ಯೋಜನೆಯಡಿಯ ಮಾರ್ಗಸೂಚಿಗಳನ್ನೇ ‘ಮಾಂಗಲ್ಯ ಭಾಗ್ಯ’ದಲ್ಲಿ ಅಳವಡಿಸಲಾಗಿದೆ. ವರನಿಗೆ ಅಂಗಿ-ಧೋತಿ, 5 ಸಾವಿರ ರೂ. ನಗದು ಹಾಗೂ ವಧುವಿಗೆ ಮಂಗಳಸೂತ್ರಕ್ಕಾಗಿ ಸೀರೆ, 1 ಸಾವಿರ ರೂ. ನಗದು, 8 ಗ್ರಾಂ. ಚಿನ್ನದ ತಾಳಿ-ಗುಂಡುಗಳನ್ನ ನೀಡಲಾಗುತ್ತದೆ.
ದೇವಾಲಯ ಆಡಳಿತ ಮಂಡಳಿಗಳು ಮದುವೆಗೆ ಬರುವ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ನೋಡಿಕೊಳ್ಳಲಿವೆ. ಯೋಜನೆಯಡಿಯಲ್ಲಿ ಸಾಮೂಹಿಕ ವಿವಾಹಕ್ಕೆ ಬೇಕಾಗುವ ವೆಚ್ಚವನ್ನು ದೇವಸ್ಥಾನದ ನಿಧಿಯಿಂದ ಭರಿಸಲಾಗುತ್ತದೆ. ದೇವಸ್ಥಾನದಿಂದ ಸಾಧ್ಯವಾಗದಿದ್ದಾಗ ಮಾತ್ರ ವಧು-ವರರಿಗೆ ನೀಡುವ ಆರ್ಥಿಕ ಸಹಾಯ ಧನವನ್ನು ಇಲಾಖೆಯ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲಾಗುವುದು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…