ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲೆಂದು ವಧು-ವರರ ಸರಳ ಸಾಮೂಹಿಕ ವಿವಾಹಕ್ಕಾಗಿ ‘ಸಪ್ತಪದಿ’ ಯೋಜನೆ ಜಾರಿಗೆ ತರಲಾಗಿದೆ. ಪ್ರಸ್ತುತ ಈ ಸಪ್ತಪದಿ ವಿವಾಹ ಯೋಜನೆಗೆ ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ ಮಾಡಲಾಗಿದೆ.
‘ಮಾಂಗಲ್ಯ ಭಾಗ್ಯ’ ಯೋಜನೆಯ ಉದ್ದೇಶವು ಮದುವೆಗೆ ದುಂದು ವೆಚ್ಚ ಮಾಡುವ ಮೂಲಕ ಬಡ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸುವುದಾಗಿದೆ. ಈ ಯೋಜನೆಯನ್ನು ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ವಿಸ್ತರಿಸಲಾಗಿದೆ.
ಸಪ್ತಪದಿ ಯೋಜನೆಯಡಿಯ ಮಾರ್ಗಸೂಚಿಗಳನ್ನೇ ‘ಮಾಂಗಲ್ಯ ಭಾಗ್ಯ’ದಲ್ಲಿ ಅಳವಡಿಸಲಾಗಿದೆ. ವರನಿಗೆ ಅಂಗಿ-ಧೋತಿ, 5 ಸಾವಿರ ರೂ. ನಗದು ಹಾಗೂ ವಧುವಿಗೆ ಮಂಗಳಸೂತ್ರಕ್ಕಾಗಿ ಸೀರೆ, 1 ಸಾವಿರ ರೂ. ನಗದು, 8 ಗ್ರಾಂ. ಚಿನ್ನದ ತಾಳಿ-ಗುಂಡುಗಳನ್ನ ನೀಡಲಾಗುತ್ತದೆ.
ದೇವಾಲಯ ಆಡಳಿತ ಮಂಡಳಿಗಳು ಮದುವೆಗೆ ಬರುವ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ನೋಡಿಕೊಳ್ಳಲಿವೆ. ಯೋಜನೆಯಡಿಯಲ್ಲಿ ಸಾಮೂಹಿಕ ವಿವಾಹಕ್ಕೆ ಬೇಕಾಗುವ ವೆಚ್ಚವನ್ನು ದೇವಸ್ಥಾನದ ನಿಧಿಯಿಂದ ಭರಿಸಲಾಗುತ್ತದೆ. ದೇವಸ್ಥಾನದಿಂದ ಸಾಧ್ಯವಾಗದಿದ್ದಾಗ ಮಾತ್ರ ವಧು-ವರರಿಗೆ ನೀಡುವ ಆರ್ಥಿಕ ಸಹಾಯ ಧನವನ್ನು ಇಲಾಖೆಯ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲಾಗುವುದು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…