Categories: ರಾಜ್ಯ

ಸಪ್ತಪದಿಗೆ ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ ಮಾಡಿದ ಸರ್ಕಾರ

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲೆಂದು ವಧು-ವರರ ಸರಳ ಸಾಮೂಹಿಕ ವಿವಾಹಕ್ಕಾಗಿ ‘ಸಪ್ತಪದಿ’ ಯೋಜನೆ ಜಾರಿಗೆ ತರಲಾಗಿದೆ. ಪ್ರಸ್ತುತ ಈ ಸಪ್ತಪದಿ ವಿವಾಹ ಯೋಜನೆಗೆ ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ ಮಾಡಲಾಗಿದೆ.

‘ಮಾಂಗಲ್ಯ ಭಾಗ್ಯ’ ಯೋಜನೆಯ ಉದ್ದೇಶವು ಮದುವೆಗೆ ದುಂದು ವೆಚ್ಚ ಮಾಡುವ ಮೂಲಕ ಬಡ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸುವುದಾಗಿದೆ. ಈ ಯೋಜನೆಯನ್ನು ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ವಿಸ್ತರಿಸಲಾಗಿದೆ.

ಸಪ್ತಪದಿ ಯೋಜನೆಯಡಿಯ ಮಾರ್ಗಸೂಚಿಗಳನ್ನೇ ‘ಮಾಂಗಲ್ಯ ಭಾಗ್ಯ’ದಲ್ಲಿ ಅಳವಡಿಸಲಾಗಿದೆ. ವರನಿಗೆ ಅಂಗಿ-ಧೋತಿ, 5 ಸಾವಿರ ರೂ. ನಗದು ಹಾಗೂ ವಧುವಿಗೆ ಮಂಗಳಸೂತ್ರಕ್ಕಾಗಿ ಸೀರೆ, 1 ಸಾವಿರ ರೂ. ನಗದು, 8 ಗ್ರಾಂ. ಚಿನ್ನದ ತಾಳಿ-ಗುಂಡುಗಳನ್ನ ನೀಡಲಾಗುತ್ತದೆ.

ದೇವಾಲಯ ಆಡಳಿತ ಮಂಡಳಿಗಳು ಮದುವೆಗೆ ಬರುವ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ನೋಡಿಕೊಳ್ಳಲಿವೆ. ಯೋಜನೆಯಡಿಯಲ್ಲಿ ಸಾಮೂಹಿಕ ವಿವಾಹಕ್ಕೆ ಬೇಕಾಗುವ ವೆಚ್ಚವನ್ನು ದೇವಸ್ಥಾನದ ನಿಧಿಯಿಂದ ಭರಿಸಲಾಗುತ್ತದೆ. ದೇವಸ್ಥಾನದಿಂದ ಸಾಧ್ಯವಾಗದಿದ್ದಾಗ ಮಾತ್ರ ವಧು-ವರರಿಗೆ ನೀಡುವ ಆರ್ಥಿಕ ಸಹಾಯ ಧನವನ್ನು ಇಲಾಖೆಯ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲಾಗುವುದು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

11 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

11 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

14 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago